<figcaption>""</figcaption>.<p><strong>ಹೊಸಪೇಟೆ:</strong> ಭಾರಿ ಮಳೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ 350 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಬೆಳೆ ನಷ್ಟವಾಗಿದೆ.</p>.<p>ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರವೂ ಮಳೆಯ ಆರ್ಭಟ ಮುಂದುವರಿಯಿತು. ನಾರಿಹಳ್ಳ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿಸಿದ್ದರಿಂದ ನೆರೆ ಬಂದು ಕುರೇಕುಪ್ಪ, ವಡ್ಡು, ಬಸಾಪುರ, ತಾಳೂರು, ಬನ್ನಿಹಟ್ಟಿ, ನಾಗಲಾಪುರ, ಬನ್ನಿಹಟ್ಟಿ ಮತ್ತು ತಾರಾನಗರದಲ್ಲಿ ಬೆಳೆ ನಷ್ಟವಾಗಿದೆ.</p>.<p>ದರೋಜಿ ಕೆರೆ ಎರಡನೇ ಸಲ ತುಂಬಿ ಕೋಡಿ ಬಿದ್ದಿರುವುದರಿಂದ ಗ್ರಾಮದ ಸುತ್ತಮುತ್ತಲಿನ ಬೆಳೆ ಹಾಳಾಗಿದೆ. ಭತ್ತ, ಮೆಣಸಿನಕಾಯಿ, ಹತ್ತಿ, ಜೋಳ, ಕರಿಬೇವು, ಕಲ್ಲಂಗಡಿ ಸೇರಿದಂತೆ ಇತರೆ ಬೆಳೆಗಳನ್ನು ರೈತರು ಬೆಳೆಸಿದ್ದಾರೆ.</p>.<p>ಹೊಸಪೇಟೆಯಲ್ಲಿ ಶನಿವಾರ ರಾತ್ರಿ ಸುರಿದಿದ್ದ ಮಳೆ, ಭಾನುವಾರ ಸಂಜೆಯ ವರೆಗೆ ಬಿಡುವು ಕೊಟ್ಟಿತ್ತು. ಸಂಜೆಯ ನಂತರ ಬಿರುಸಾಗಿ ಸುರಿಯಿತು. ಕೂಡ್ಲಿಗಿ, ಕೊಟ್ಟೂರಿನಲ್ಲೂ ಮಳೆಯಾಗಿದೆ.</p>.<div style="text-align:center"><figcaption><strong>ಸಂಡೂರು ತಾಲ್ಲೂಕಿನ ದರೋಜಿ ಕೆರೆಗೆ ಕೋಡಿ ಬಿದ್ದಿರುವುದು</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹೊಸಪೇಟೆ:</strong> ಭಾರಿ ಮಳೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ 350 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಬೆಳೆ ನಷ್ಟವಾಗಿದೆ.</p>.<p>ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರವೂ ಮಳೆಯ ಆರ್ಭಟ ಮುಂದುವರಿಯಿತು. ನಾರಿಹಳ್ಳ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿಸಿದ್ದರಿಂದ ನೆರೆ ಬಂದು ಕುರೇಕುಪ್ಪ, ವಡ್ಡು, ಬಸಾಪುರ, ತಾಳೂರು, ಬನ್ನಿಹಟ್ಟಿ, ನಾಗಲಾಪುರ, ಬನ್ನಿಹಟ್ಟಿ ಮತ್ತು ತಾರಾನಗರದಲ್ಲಿ ಬೆಳೆ ನಷ್ಟವಾಗಿದೆ.</p>.<p>ದರೋಜಿ ಕೆರೆ ಎರಡನೇ ಸಲ ತುಂಬಿ ಕೋಡಿ ಬಿದ್ದಿರುವುದರಿಂದ ಗ್ರಾಮದ ಸುತ್ತಮುತ್ತಲಿನ ಬೆಳೆ ಹಾಳಾಗಿದೆ. ಭತ್ತ, ಮೆಣಸಿನಕಾಯಿ, ಹತ್ತಿ, ಜೋಳ, ಕರಿಬೇವು, ಕಲ್ಲಂಗಡಿ ಸೇರಿದಂತೆ ಇತರೆ ಬೆಳೆಗಳನ್ನು ರೈತರು ಬೆಳೆಸಿದ್ದಾರೆ.</p>.<p>ಹೊಸಪೇಟೆಯಲ್ಲಿ ಶನಿವಾರ ರಾತ್ರಿ ಸುರಿದಿದ್ದ ಮಳೆ, ಭಾನುವಾರ ಸಂಜೆಯ ವರೆಗೆ ಬಿಡುವು ಕೊಟ್ಟಿತ್ತು. ಸಂಜೆಯ ನಂತರ ಬಿರುಸಾಗಿ ಸುರಿಯಿತು. ಕೂಡ್ಲಿಗಿ, ಕೊಟ್ಟೂರಿನಲ್ಲೂ ಮಳೆಯಾಗಿದೆ.</p>.<div style="text-align:center"><figcaption><strong>ಸಂಡೂರು ತಾಲ್ಲೂಕಿನ ದರೋಜಿ ಕೆರೆಗೆ ಕೋಡಿ ಬಿದ್ದಿರುವುದು</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>