ಅರ್ಜಿದಾರರು ಇಚ್ಛಿಸಿದಲ್ಲಿ ನಾಲ್ಕು ತಿಂಗಳೊಳಗೆ ರಾಜ್ಯಪಾಲರಿಗೆ ಮೇಲ್ಮನವಿ ಸಲ್ಲಿಸಲು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರು ಕಾಲಾವಕಾಶ ನೀಡಿದ್ದಾರೆ. ಆದರೆ, ‘ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರ ಅಭಿಪ್ರಾಯ ಪಡೆದು, ಅದನ್ನು ಆಧರಿಸಿರಾಜ್ಯಪಾಲರು ನಿರ್ಣಯ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಎರಡೂ ವಿಶ್ವವಿದ್ಯಾಲಯಗಳು ಪದವಿ ರದ್ದುಗೊಳಿಸಿದ ಆದೇಶ ಜಾರಿಯಲ್ಲಿರುತ್ತದೆ’ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.