‘ನಿತ್ಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಎಲ್ಲೆಡೆ ಸ್ವಚ್ಛತೆ ಕಂಡು ಬರುತ್ತಿದೆ. ಬರುವ ದಿನಗಳಲ್ಲಿ ಇದರಲ್ಲಿ ಇನ್ನಷ್ಟು ಸುಧಾರಣೆ ತರಲಾಗುವುದು. ಕೆಲವರು ಮನೆಯಲ್ಲೇ ಹಸಿ, ಒಣ ಕಸಿ ಬೇರ್ಪಡಿಸಿ ಕೊಡುತ್ತಿದ್ದಾರೆ. ಮತ್ತೆ ಕೆಲವರು ಮನೆಯಲ್ಲೇ ಗೊಬ್ಬರ ನಿರ್ಮಿಸಿ, ಅವರ ತೋಟಕ್ಕೆ ಹಾಕುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗಬೇಕು. ಆ ನಿಟ್ಟಿನಲ್ಲಿ ನಗರಸಭೆಯಿಂದ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಲಾಗುವುದು’ ಎಂದು ತಿಳಿಸಿದರು.