ಈ ರೈಲು ಮಾರ್ಗದಿಂದ ಹರಿಹರ, ದಾವಣಗೆರೆ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೊಪ್ಪಳ, ಬಳ್ಳಾರಿ ಭಾಗದ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬೆಂಗಳೂರು-ಹೊಸಪೇಟೆ ಮತ್ತು ಹುಬ್ಬಳ್ಳಿ-ಗುಂತಕಲ್ ಮಾರ್ಗಗಳ ಮಧ್ಯೆ ಸಂಪರ್ಕ ಬೆಸೆಯುವ ಕೊಂಡಿಯಾಗಲಿದೆ. ಅಷ್ಟೇ ಅಲ್ಲ, ಮಂಗಳೂರು, ಹಾಸನ, ಮೈಸೂರಿಗೆ ಸಂಪರ್ಕ ಬೆಸೆಯುತ್ತದೆ. ಬೆಂಗಳೂರಿಗೆ ಸಂಚರಿಸುವ ಪ್ರಯಾಣದ ಅವಧಿ ಕೂಡ ತಗ್ಗಲಿದೆ.