ಅರಣ್ಯ ಸಚಿವ ಆನಂದ್ ಸಿಂಗ್ ಅವರು ಅಂತ್ಯೋದಯ ಹಾಗೂ ಬಿ.ಪಿ.ಎಲ್. ಕಾರ್ಡುದಾರರಿಗೆ ಈ ಕಿಟ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಇತ್ತೀಚೆಗೆ ಕಿಟ್ ಹಾಗೂ ಟೋಕನ್ ಹಂಚುವಾಗ ಅಪಾರ ಸಂಖ್ಯೆಯಲ್ಲಿ ಜನ ನೆರೆದಿದ್ದರು. ತೀವ್ರ ಟೀಕೆ ವ್ಯಕ್ತವಾಗಿದ್ದರಿಂದ ಅದನ್ನು ಮೊಟಕುಗೊಳಿಸಿದ್ದರು. ಫಲಾನುಭವಿಗಳ ಮನೆಬಾಗಿಲಿಗೆ ಹೋಗಿ ಟೋಕನ್ ನೀಡಿದ್ದು, ಈಗ ಆಯಾ ಬಡಾವಣೆಗಳಲ್ಲಿ ಕಿಟ್ ವಿತರಿಸಲಾಗುತ್ತಿದೆ.