<p><strong>ಹೊಸಪೇಟೆ</strong>: ಇಲ್ಲಿಗೆ ಸಮೀಪದ ತುಂಗಭದ್ರಾ ಜಲಾಶಯದ ಒಳಹರಿವು ಸತತವಾಗಿ ತಗ್ಗುತ್ತಲೇ ಇದೆ.</p>.<p>ಗುರುವಾರ 50,609 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಬುಧವಾರ 62,943 ಕ್ಯುಸೆಕ್, ಮಂಗಳವಾರ 98,916 ಕ್ಯುಸೆಕ್, ಸೋಮವಾರ 1,07,012 ಕ್ಯುಸೆಕ್ ಒಳಹರಿವು ಇತ್ತು.</p>.<p>1,633 ಅಡಿ (101 ಟಿಎಂಸಿ) ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಗುರುವಾರ 1,629.62 ಅಡಿ (88.38 ಟಿಎಂಸಿ) ನೀರಿನ ಸಂಗ್ರಹವಿದೆ. ಜಲಾಶಯ ಸಂಪೂರ್ಣ ತುಂಬಲು 13 ಟಿಎಂಸಿ ನೀರು ಬೇಕು. ಸದ್ಯ ನಿತ್ಯ ಸರಾಸರಿ 4 ಟಿಎಂಸಿ ನೀರು ಹರಿದು ಬರುತ್ತಿದೆ.</p>.<p>ಶಿವಮೊಗ್ಗದ ತುಂಗಾ ಜಲಾಶಯದಿಂದ ಸದ್ಯ 30,187 ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿರುವುದರಿಂದ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇನ್ನೂ ಮಳೆಗಾಲ ಮುಗಿಯಲು ಒಂದುವರೆ ತಿಂಗಳಿದ್ದು, ಅಷ್ಟರೊಳಗೆ ಒಂದೆರಡು ಭಾರಿ ಮಳೆಯಾದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಇಲ್ಲಿಗೆ ಸಮೀಪದ ತುಂಗಭದ್ರಾ ಜಲಾಶಯದ ಒಳಹರಿವು ಸತತವಾಗಿ ತಗ್ಗುತ್ತಲೇ ಇದೆ.</p>.<p>ಗುರುವಾರ 50,609 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಬುಧವಾರ 62,943 ಕ್ಯುಸೆಕ್, ಮಂಗಳವಾರ 98,916 ಕ್ಯುಸೆಕ್, ಸೋಮವಾರ 1,07,012 ಕ್ಯುಸೆಕ್ ಒಳಹರಿವು ಇತ್ತು.</p>.<p>1,633 ಅಡಿ (101 ಟಿಎಂಸಿ) ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಗುರುವಾರ 1,629.62 ಅಡಿ (88.38 ಟಿಎಂಸಿ) ನೀರಿನ ಸಂಗ್ರಹವಿದೆ. ಜಲಾಶಯ ಸಂಪೂರ್ಣ ತುಂಬಲು 13 ಟಿಎಂಸಿ ನೀರು ಬೇಕು. ಸದ್ಯ ನಿತ್ಯ ಸರಾಸರಿ 4 ಟಿಎಂಸಿ ನೀರು ಹರಿದು ಬರುತ್ತಿದೆ.</p>.<p>ಶಿವಮೊಗ್ಗದ ತುಂಗಾ ಜಲಾಶಯದಿಂದ ಸದ್ಯ 30,187 ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿರುವುದರಿಂದ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇನ್ನೂ ಮಳೆಗಾಲ ಮುಗಿಯಲು ಒಂದುವರೆ ತಿಂಗಳಿದ್ದು, ಅಷ್ಟರೊಳಗೆ ಒಂದೆರಡು ಭಾರಿ ಮಳೆಯಾದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>