ಹೊಸಪೇಟೆ: ‘ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ ಆ. 2ರಿಂದ ಪ್ರತಿ ಭಾನುವಾರ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ’ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್. ಕಿರಣ್ ಶುಕ್ರವಾರ ತಿಳಿಸಿದ್ದಾರೆ.
‘ಕೊರೊನಾ ಸೋಂಕು ಹರಡುವುದನ್ನು ತಡೆಗೆ ಭಾನುವಾರ ವಿಧಿಸಿದ್ದ ಲಾಕ್ಡೌನ್ ಅನ್ನು ಸರ್ಕಾರ ತೆಗೆದು ಹಾಕಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಮಂಗಳವಾರ ರಜಾ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಾರ್ವಜನಿಕರು ಉದ್ಯಾನಕ್ಕೆ ಬರಬಹುದು’ ಎಂದು ಹೇಳಿದ್ದಾರೆ.