<p><strong>ಹೊಸಪೇಟೆ:</strong> ರಾಜ್ಯ ಸರ್ಕಾರ ಘೋಷಿಸಿರುವ ಸಹಾಯ ಧನ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಇಲ್ಲಿನ ಕಾರ್ಮಿಕ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ನಂತರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಸ್ಥಳೀಯ ಅಧಿಕಾರಿಗೆ ಸಲ್ಲಿಸಿದರು.</p>.<p>‘ಲಾಕ್ಡೌನ್ನಿಂದ ಸಂಕಷ್ಟಕ್ಕೆ ಈಡಾದ ಕಾರ್ಮಿಕರಿಗೆ ರಾಜ್ಯ ಸರ್ಕಾರ ₹ 5,000 ಸಹಾಯ ಧನ ಘೋಷಿಸಿದೆ. ಆದರೆ, ಇದುವರೆಗೆ ಆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಕೂಡಲೇ ಹಣ ಬಿಡುಗಡೆಗೆ ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡ ಎಲ್ಲ ಕಾರ್ಮಿಕರಿಗೆ ಜಿಲ್ಲಾ ಕಾರ್ಮಿಕ ಇಲಾಖೆಯ ಕಚೇರಿ ಮೂಲಕವೇ ಸಹಾಯ ಧನ ಕೊಡಬೇಕು. 60 ವರ್ಷ ಮೀರಿದ ಎಲ್ಲ ಕಾರ್ಮಿಕರಿಗೆ ಪಿಂಚಣಿ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಫೆಡರೇಶನ್ ಜಿಲ್ಲಾ ಅಧ್ಯಕ್ಷ ಎನ್. ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಎಂ. ಗೋಪಾಲ್, ಕಾರ್ಯದರ್ಶಿ ರಾಮಾಂಜಿನಿ, ಖಜಾಂಚಿ ಬೀಯಮ್ಮ, ಉಮಾ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ರಾಜ್ಯ ಸರ್ಕಾರ ಘೋಷಿಸಿರುವ ಸಹಾಯ ಧನ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಇಲ್ಲಿನ ಕಾರ್ಮಿಕ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ನಂತರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಸ್ಥಳೀಯ ಅಧಿಕಾರಿಗೆ ಸಲ್ಲಿಸಿದರು.</p>.<p>‘ಲಾಕ್ಡೌನ್ನಿಂದ ಸಂಕಷ್ಟಕ್ಕೆ ಈಡಾದ ಕಾರ್ಮಿಕರಿಗೆ ರಾಜ್ಯ ಸರ್ಕಾರ ₹ 5,000 ಸಹಾಯ ಧನ ಘೋಷಿಸಿದೆ. ಆದರೆ, ಇದುವರೆಗೆ ಆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಕೂಡಲೇ ಹಣ ಬಿಡುಗಡೆಗೆ ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡ ಎಲ್ಲ ಕಾರ್ಮಿಕರಿಗೆ ಜಿಲ್ಲಾ ಕಾರ್ಮಿಕ ಇಲಾಖೆಯ ಕಚೇರಿ ಮೂಲಕವೇ ಸಹಾಯ ಧನ ಕೊಡಬೇಕು. 60 ವರ್ಷ ಮೀರಿದ ಎಲ್ಲ ಕಾರ್ಮಿಕರಿಗೆ ಪಿಂಚಣಿ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಫೆಡರೇಶನ್ ಜಿಲ್ಲಾ ಅಧ್ಯಕ್ಷ ಎನ್. ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಎಂ. ಗೋಪಾಲ್, ಕಾರ್ಯದರ್ಶಿ ರಾಮಾಂಜಿನಿ, ಖಜಾಂಚಿ ಬೀಯಮ್ಮ, ಉಮಾ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>