ಬೆಳಿಗ್ಗೆಯಿಂದ ಸಂಜೆಯ ವರೆಗೆ ನೆತ್ತಿ ಸುಡುವ ಬಿಸಿಲಿತ್ತು. ಸಂಜೆ ಆರು ಗಂಟೆಯ ನಂತರ ಏಕಾಏಕಿ ದಟ್ಟ ಕಾರ್ಮೋಡ ಬಂದು, ಬಳಿಕ ವರ್ಷಧಾರೆಯಾಯಿತು. ಒಂದು ಗಂಟೆ ಸುರಿದ ಬಿರುಸಿನ ಮಳೆಗೆ ನಗರದ ಕಾಲೇಜು ರಸ್ತೆ, ಚಿತ್ತವಾಡ್ಗಿ, ಬಸವೇಶ್ವರ ಬಡಾವಣೆ, ಹಂಪಿ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿತ್ತು. ವಾಹನ ಸಂಚಾರ ನಿಧಾನಗೊಂಡಿತ್ತು. ಇದೇ ವೇಳೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದರಿಂದ ಎಲ್ಲೆಡೆ ಅಂಧಕಾರ ಇತ್ತು.