<p><strong>ಹೊಸಪೇಟೆ:</strong> ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ರಾಣಿಪೇಟೆಯಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮನೆ ಎದುರು ಪ್ರತಿಭಟನೆ ನಡೆಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.</p>.<p>ಮೀಸಲಾತಿಯ ಪ್ರಯೋಜನ ಸ್ಪೃಶ್ಯ ಜಾತಿಗಳಿಗೆ ಸಿಗುತ್ತಿರುವುದರಿಂದ ಅಸ್ಪೃಶ್ಯ ಜಾತಿಗಳವರಿಗೆ ಅನ್ಯಾಯವಾಗುತ್ತಿದೆ. ಈ ವಿಷಯವನ್ನು ನ್ಯಾಯಾಲಯ ಕೂಡ ಹೇಳಿದೆ. ಹೀಗಿರುವಾಗ ಅದನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದು ಅಸ್ಪೃಶ್ಯ ಜಾತಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮೂಲ ಅಸ್ಪೃಶ್ಯ ಜಾತಿಗಳ ಮೀಸಲು ಪ್ರಮಾಣವನ್ನು ಶೇ 15ರಿಂದ 20ಕ್ಕೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.<br />ಒಕ್ಕೂಟದ ಮುಖಂಡರಾದ ಸೋಮೇಶಖರ್ ಬಣ್ಣದಮನೆ, ಸಣ್ಣ ಈರಪ್ಪ, ನಿಂಬಗಲ್ ರಾಮಕೃಷ್ಣ, ಮಲ್ಲಿಕಾರ್ಜುನ ಕಮಲಾಪುರ, ಎಚ್.ವೆಂಕಟೇಶ್, ಎಚ್.ಸಿ.ರವಿ, ನೀಲಕಂಠ, ಪ್ರಕಾಶ್, ಆನಂದ್, ರಾಮಚಂದ್ರಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ರಾಣಿಪೇಟೆಯಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮನೆ ಎದುರು ಪ್ರತಿಭಟನೆ ನಡೆಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.</p>.<p>ಮೀಸಲಾತಿಯ ಪ್ರಯೋಜನ ಸ್ಪೃಶ್ಯ ಜಾತಿಗಳಿಗೆ ಸಿಗುತ್ತಿರುವುದರಿಂದ ಅಸ್ಪೃಶ್ಯ ಜಾತಿಗಳವರಿಗೆ ಅನ್ಯಾಯವಾಗುತ್ತಿದೆ. ಈ ವಿಷಯವನ್ನು ನ್ಯಾಯಾಲಯ ಕೂಡ ಹೇಳಿದೆ. ಹೀಗಿರುವಾಗ ಅದನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದು ಅಸ್ಪೃಶ್ಯ ಜಾತಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮೂಲ ಅಸ್ಪೃಶ್ಯ ಜಾತಿಗಳ ಮೀಸಲು ಪ್ರಮಾಣವನ್ನು ಶೇ 15ರಿಂದ 20ಕ್ಕೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.<br />ಒಕ್ಕೂಟದ ಮುಖಂಡರಾದ ಸೋಮೇಶಖರ್ ಬಣ್ಣದಮನೆ, ಸಣ್ಣ ಈರಪ್ಪ, ನಿಂಬಗಲ್ ರಾಮಕೃಷ್ಣ, ಮಲ್ಲಿಕಾರ್ಜುನ ಕಮಲಾಪುರ, ಎಚ್.ವೆಂಕಟೇಶ್, ಎಚ್.ಸಿ.ರವಿ, ನೀಲಕಂಠ, ಪ್ರಕಾಶ್, ಆನಂದ್, ರಾಮಚಂದ್ರಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>