ಹೊಸಪೇಟೆ: ಸೋಮವಾರ ನಗರಕ್ಕೆ ಬಂದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಇಲ್ಲಿನ ಕನಕದಾಸ ವೃತ್ತದಲ್ಲಿ ಸ್ವಾಗತಿಸಿ ಬರಮಾಡಿಕೊಂಡರು.
ರಾಘವೇಂದ್ರ ಅವರು ಸಂಡೂರು ತಾಲ್ಲೂಕಿನ ಯಶವಂತನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರದ ಮೂಲಕ ತೆರಳುತ್ತಿದ್ದರು. ವಿಷಯ ತಿಳಿದು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಕನಕದಾಸ ವೃತ್ತದಲ್ಲಿ ಸೇರಿ ಅವರನ್ನು ಬರಮಾಡಿಕೊಂಡರು.
ಸ್ಥಳೀಯರ ಸನ್ಮಾನ ಸ್ವೀಕರಿಸಿದ ರಾಘವೇಂದ್ರ ಅವರು ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೆಲಹೊತ್ತು ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ನಿರ್ಗಮಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ್ ಮೇಟಿ, ಬಿ. ಜೀವರತ್ನ, ಮುಖಂಡರಾದ ಸಾಲಿ ಸಿದ್ದಯ್ಯ ಸ್ವಾಮಿ, ಅಯ್ಯಾಳಿ ತಿಮ್ಮಪ್ಪ, ಸಂಗಪ್ಪ ಮೊದಲಾದವರು ಇದ್ದರು.