ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ನಗರದಲ್ಲಿನ ಧಾರ್ಮಿಕ ಕಟ್ಟಡಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಗರಸಭೆ ಫೆಬ್ರುವರಿಯಲ್ಲಿ ಕೈಗೆತ್ತಿಕೊಂಡಿತ್ತು. ಅಂದೇ ಮಸೀದಿಯ ಮಳಿಗೆಗಳನ್ನು ತೆರವುಗೊಳಿಸಲು ಮುಂದಾಗಿತ್ತು. ಆದರೆ, ದರ್ಗಾ ಮಸೀದಿ ಸಮಿತಿಯಯವರು, ‘ಸ್ವಯಂಪ್ರೇರಣೆಯಿಂದ ಮಳಿಗೆಗಳನ್ನು ತೆರವುಗೊಳಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದರಿಂದ ಕಾರ್ಯಾಚರಣೆ ಕೈಬಿಡಲಾಗಿತ್ತು.