<p><strong>ಹೊಸಪೇಟೆ: </strong>ಇಲ್ಲಿನ ಮೂರಂಗಡಿ ವೃತ್ತದಲ್ಲಿನ ದರ್ಗಾ ಮಸೀದಿಯ 21 ಮಳಿಗೆಗಳ ತೆರವು ಕಾರ್ಯಾಚರಣೆ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಿತು.</p>.<p>ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ನಗರದಲ್ಲಿನ ಧಾರ್ಮಿಕ ಕಟ್ಟಡಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಗರಸಭೆ ಫೆಬ್ರುವರಿಯಲ್ಲಿ ಕೈಗೆತ್ತಿಕೊಂಡಿತ್ತು. ಅಂದೇ ಮಸೀದಿಯ ಮಳಿಗೆಗಳನ್ನು ತೆರವುಗೊಳಿಸಲು ಮುಂದಾಗಿತ್ತು. ಆದರೆ, ದರ್ಗಾ ಮಸೀದಿ ಸಮಿತಿಯಯವರು, ‘ಸ್ವಯಂಪ್ರೇರಣೆಯಿಂದ ಮಳಿಗೆಗಳನ್ನು ತೆರವುಗೊಳಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದರಿಂದ ಕಾರ್ಯಾಚರಣೆ ಕೈಬಿಡಲಾಗಿತ್ತು.</p>.<p>ನಂತರ ಲಾಕ್ಡೌನ್ನಿಂದ ನನೆಗುದಿಗೆ ಬಿದ್ದಿತ್ತು. ದರ್ಗಾ ಮಸೀದಿ ಸಮಿತಿಯವರು ತೆರವುಗೊಳಿಸದ ಕಾರಣ ಸೋಮವಾರ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಳತೆ ಮಾಡಿ ಕಟ್ಟಡಗಳನ್ನು ತೆರವುಗೊಳಿಸುತ್ತಿದೆ.</p>.<p>‘ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಮಸೀದಿಗೆ ಹೊಂದಿಕೊಂಡಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗುತ್ತಿದೆ. ನಿರ್ದಿಷ್ಟ ಗಡುವಿನೊಳಗೆ ತೆರವು ಕಾರ್ಯಾಚರಣೆ ಮುಗಿಸಬೇಕೆಂದು ನ್ಯಾಯಾಲಯವೇ ನಿರ್ದೇಶನ ಕೊಟ್ಟಿದೆ. ಅದರ ಪ್ರಕಾರ ಕ್ರಮ ಜರುಗಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಶೇಕ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಇಲ್ಲಿನ ಮೂರಂಗಡಿ ವೃತ್ತದಲ್ಲಿನ ದರ್ಗಾ ಮಸೀದಿಯ 21 ಮಳಿಗೆಗಳ ತೆರವು ಕಾರ್ಯಾಚರಣೆ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಿತು.</p>.<p>ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ನಗರದಲ್ಲಿನ ಧಾರ್ಮಿಕ ಕಟ್ಟಡಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಗರಸಭೆ ಫೆಬ್ರುವರಿಯಲ್ಲಿ ಕೈಗೆತ್ತಿಕೊಂಡಿತ್ತು. ಅಂದೇ ಮಸೀದಿಯ ಮಳಿಗೆಗಳನ್ನು ತೆರವುಗೊಳಿಸಲು ಮುಂದಾಗಿತ್ತು. ಆದರೆ, ದರ್ಗಾ ಮಸೀದಿ ಸಮಿತಿಯಯವರು, ‘ಸ್ವಯಂಪ್ರೇರಣೆಯಿಂದ ಮಳಿಗೆಗಳನ್ನು ತೆರವುಗೊಳಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದರಿಂದ ಕಾರ್ಯಾಚರಣೆ ಕೈಬಿಡಲಾಗಿತ್ತು.</p>.<p>ನಂತರ ಲಾಕ್ಡೌನ್ನಿಂದ ನನೆಗುದಿಗೆ ಬಿದ್ದಿತ್ತು. ದರ್ಗಾ ಮಸೀದಿ ಸಮಿತಿಯವರು ತೆರವುಗೊಳಿಸದ ಕಾರಣ ಸೋಮವಾರ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಳತೆ ಮಾಡಿ ಕಟ್ಟಡಗಳನ್ನು ತೆರವುಗೊಳಿಸುತ್ತಿದೆ.</p>.<p>‘ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಮಸೀದಿಗೆ ಹೊಂದಿಕೊಂಡಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗುತ್ತಿದೆ. ನಿರ್ದಿಷ್ಟ ಗಡುವಿನೊಳಗೆ ತೆರವು ಕಾರ್ಯಾಚರಣೆ ಮುಗಿಸಬೇಕೆಂದು ನ್ಯಾಯಾಲಯವೇ ನಿರ್ದೇಶನ ಕೊಟ್ಟಿದೆ. ಅದರ ಪ್ರಕಾರ ಕ್ರಮ ಜರುಗಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಶೇಕ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>