ರಾಯಚೂರು: ‘ಯಾರೋ ಬರೆದು ಕೊಟ್ಟ ಕನ್ನಡದ ಹೆಸರುಗಳನ್ನು ಪ್ರಧಾನಿ ನರೇಂದ್ರ ಮೋದಿ ಓದಿ ಹೇಳುತ್ತಿದ್ದಾರೆ. ಅದನ್ನು ಕೇಳಿಸಿಕೊಂಡು ಜನ ಚಪ್ಪಾಳೆ ತಟ್ಟುತ್ತಿದ್ದಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.
ತಾಲ್ಲೂಕಿನ ಗಿಲ್ಲೇಸುಗೂರಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದರು.
‘ಮಹಾರಾಷ್ಟ್ರಕ್ಕೆ ಹೋದರೆ ನಾನು ಮಹಾರಾಷ್ಟ್ರದವನು ಎಂದು ಮೋದಿ ಹೇಳುತ್ತಾರೆ. ಅದೇ ರೀತಿ, ಗುಜರಾತ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿಯೂ ಇದನ್ನೇ ಹೇಳಿದ್ದಾರೆ’ ಎಂದು ಲೇವಡಿ ಮಾಡಿದರು.
‘ರೈತರ ಸಾಲ ಮನ್ನಾ ಮಾಡುವುದಿಲ್ಲ ಎನ್ನುವುದನ್ನು ಪ್ರಧಾನ ಮಂತ್ರಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ರೈತರ ಸಂಕಷ್ಟಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸುವ ಗುಣ ಅವರಲ್ಲಿ ಇಲ್ಲ. ರೈತರು ತಮ್ಮ ಕಲ್ಯಾಣವನ್ನು ಬಯಸುವುದಾದರೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರು
ಬೇಕಾದುದು ಅನಿವಾರ್ಯ’ ಎಂದರು.