‘ಶ್ರೀರಾಮುಲು ಹಾಗೂ ನಾನು ಆತ್ಮೀಯ ಸ್ನೇಹಿತರು. ನನ್ನನ್ನು ರಾಜಕೀಯಕ್ಕೆ ಕರೆತಂದವರೇ ಅವರು. ಅವರೊಂದು ಪಕ್ಷ, ನಾನೊಂದು ಪಕ್ಷದಲ್ಲಿದ್ದಾಗ ಅಂದಿನ ಸನ್ನಿವೇಶಕ್ಕೆ ತಕ್ಕಂತೆ ಮಾತನಾಡಿದ್ದೇವೆಯೆ ಹೊರತು ಯಾವುದೇ ರೀತಿಯ ದುರುದ್ದೇಶದಿಂದಲ್ಲ. ರಾಜಕೀಯದಲ್ಲಿ ನನಗಿಂತ ಹಿರಿಯರಾಗಿರುವ ಅವರಿಗೇ ಬಳ್ಳಾರಿ ಉಸ್ತುವಾರಿ ನೀಡಬೇಕು. ಅಷ್ಟೇ ಅಲ್ಲ, ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಮಾಡಬೇಕು’ ಎಂದು ಆಗ್ರಹಿಸಿದರು.