ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕೆಲವೊಮ್ಮೆ ಇಂತಹ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಾಜೀನಾಮೆ ಕೊಡುವ ಯಾವ ಉದ್ದೇಶವೂ ನನಗಿರಲಿಲ್ಲ. ಆದರೆ, ಮೈತ್ರಿ ಸರ್ಕಾರದ ದುರಾಡಳಿತದಿಂದ ವಿಜಯನಗರ ಕ್ಷೇತ್ರ ಕಡೆಗಣನೆಗೆ ಒಳಗಾಗಿತ್ತು. ಯಾವ ಕೆಲಸಗಳು ಆಗುತ್ತಿರಲಿಲ್ಲ. ಹೀಗಾಗಿ ಇಂತಹ ಕಠಿಣ ನಿರ್ಧಾರ ತೆಗೆದುಕೊಂಡೆ. ಈ ಚುನಾವಣೆಗೆ ನಾನು ಕಾರಣನಲ್ಲ. ಸಮ್ಮಿಶ್ರ ಸರ್ಕಾರವೇ ಕಾರಣ.