ಗೆದ್ದರೆ ನನ್ನ ಮೊದಲ ಆದ್ಯತೆ ಐ.ಎಸ್.ಆರ್. ಸಕ್ಕರೆ ಕಾರ್ಖಾನೆ ಆರಂಭಿಸುವುದು. ಅದು ರೈತರ ಜೀವನಾಡಿ. ರಾಜಕೀಯ ಕಾರಣಕ್ಕಾಗಿ ಅದನ್ನು ಮುಚ್ಚಲಾಗಿದೆ. ಹೊಸ ಜಲಾಶಯ ಕಟ್ಟಲು ಆಗುವುದಿಲ್ಲ. ಸಮನಾಂತರ ಜಲಾಶಯಕ್ಕೆ ನೀಲ ನಕಾಶೆ ಸಿದ್ಧಪಡಿಸಿ, ನೀರು ಸಂಗ್ರಹಿಸಲು ಪ್ರಯತ್ನಿಸುವೆ. ಕೆರೆಗಳ ಅಭಿವೃದ್ಧಿಗೆ ಒತ್ತು ಕೊಡುವೆ. ಎಲ್ಲಾ ವಾರ್ಡ್ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಶ್ರಮಿಸುವೆ.