ಬಳ್ಳಾರಿ: ಜಿಲ್ಲೆಯಿಂದ ತಮಿಳುನಾಡಿಗೆ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಿಸುತ್ತಿದ್ದ 19 ಲಾರಿಗಳನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಅದಿರು ಸಾಗಣೆಯನ್ನು 2010ರಲ್ಲೇ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿ 19 ಲಾರಿಗಳಲ್ಲಿ ‘ರಾಕ್ ಡಸ್ಟ್’ ಸಾಗಿಸಲಾಗುತ್ತಿತ್ತು.
‘ಬಳ್ಳಾರಿ ಇಸ್ಪಾತ್ ಕಂಪನಿ ಹೆಸರಿನಲ್ಲಿ 19 ಲಾರಿಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣದ ಅದಿರು ತುಂಬಿ ತಮಿಳುನಾಡಿಗೆ ಸಾಗಿಸಲಾಗುತ್ತಿತ್ತು. ಲಾರಿ ಮತ್ತು ಚಾಲಕರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.