‘ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ವ್ಯಾಪ್ತಿಗೆ ತಾಲ್ಲೂಕಿನ ಮರಿಯಮ್ಮನಹಳ್ಳಿ, ವ್ಯಾಸನಕೆರೆ, ವೆಂಕಟಾಪುರ ಸೇರಿದಂತೆ ಸುತ್ತಮುತ್ತಲಿನ 9 ಗ್ರಾಮಗಳನ್ನು ನಗರಾಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ನಗರ ಮತ್ತು ಗ್ರಾಮೀಣ ಯೋಜನಾ ಕಾಯ್ದೆ ಅನ್ವಯ ಭೂ ಉಪಯೋಗದ ನಕಾಶೆಯನ್ನು ತಯಾರಿಸಿ ಮಾ.30ರ ಒಳಗೆ ಆಕ್ಷೇಪಣೆಗೆ ಪ್ರಕಟಣೆ ಹೊರಡಿಸಿದೆ. ಆದರೆ, ಚಿಲಕನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಕೈಬಿಟ್ಟಿರುವುದು ಸರಿಯಲ್ಲ’ ಎಂದ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್. ರಾಜಪ್ಪ ಅಸಮಾಧಾನ ಹೊರಹಾಕಿದರು.