‘ಕೆಲ ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗುತ್ತಿಲ್ಲ. ಅದಕ್ಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸ್ಥಾಯಿ ಸಮಿತಿ ಸಭೆಗೆ ಅನೇಕ ಅಧಿಕಾರಿಗಳು ಹಾಜರಾಗಿರಲಿಲ್ಲ. ಸೋಮವಾರ ನಡೆಯಲಿರುವ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸದಿದ್ದರೆ ಸಭೆ ಮೊಟಕುಗೊಳಿಸಬೇಕು ಎಂದು ಸದಸ್ಯರು ಒತ್ತಾಯಿಸಿದ್ದಾರೆ. ಹಾಗಾಗಿ ಎಲ್ಲರೂ ಸಭೆಗೆ ಬರಬೇಕು. ಒಂದುವೇಳೆ ಸಭೆಗೆ ಗೈರು ಹಾಜರಾದರೆ ಅದಕ್ಕೆ ಅಂತಹವರನ್ನು ಹೊಣೆಗಾರರಾಗಿ ಮಾಡಿ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು‘ ಎಂದು ಎಚ್ಚರಿಕೆ ನೀಡಿದ್ದಾರೆ.