ತುಂಗಭದ್ರಾ ನದಿ ಮೂಲಕ ನೀರನ್ನೆತ್ತಿ 18 ಕೆರೆ ಹಾಗೂ ನಾಲ್ಕು ಚೆಕ್ ಡ್ಯಾಂಗಳನ್ನು ತುಂಬಿಸಿ, ಕೃಷಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆ ಇದಾಗಿದೆ. ಇದರಿಂದಾಗಿ ತಾಲ್ಲೂಕಿನ ಇಂಗಳಗಿ, ವಡ್ಡರಹಳ್ಳಿ, ಪಿ.ಕೆ. ಹಳ್ಳಿ, ಬೈಲುವದ್ದಿಗೇರಿ, ಗುಂಡ್ಲವದ್ದಿಗೇರಿ, ಕಾಕುಬಾಳು, ಧರ್ಮಸಾಗರ, ಜಿ.ಜಿ. ಕ್ಯಾಂಪ್, ಕೊಟಗಿನಹಾಳು, ಗಾದಿಗನೂರು ಹಾಗೂ ಭುವನಹಳ್ಳಿ ಗ್ರಾಮಗಳಿಗೆ ಅನುಕೂಲವಾಗಲಿದೆ.