ಪಡಿತರ ವ್ಯವಸ್ಥೆಯ ಸಾರ್ವತ್ರಿಕರಣ, ಅಗತ್ಯವಸ್ತುಗಳ ಬೆಲೆ ಏರಿಕೆಗೆ ತಡೆ, ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕ ರಿಗೆ ಕೆಲಸ ಕೊಡಬೇಕು ಎಂಬುದು ಸೇರಿ ಹನ್ನೆರಡು ಬೇಡಿಕೆಗಳ ಈಡೇರಿಕೆಗಾಗಿ ಹಲವು ಬಾರಿ ಗಮನ ಸೆಳೆದರೂ ಕೇಂದ್ರ ಕ್ರಮ ವಹಿಸಿಲ್ಲ. ಹೀಗಾಗಿ ಮುಷ್ಕರದ ಸಲುವಾಗಿ ಬಂದ್ ಆಚರಿಸಲಾಗುವುದು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.