ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಜಗದೀಶ್ ಶೆಟ್ಟರ್ ಭೇಟಿ

Last Updated 4 ಡಿಸೆಂಬರ್ 2018, 6:25 IST
ಅಕ್ಷರ ಗಾತ್ರ

ಹೊಸಪೇಟೆ: ಶಾಸಕ ಜಗದೀಶ್ ಶೆಟ್ಟರ್ ಅವರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ತಾಲ್ಲೂಕಿನ ಕಾಕುಬಾಳು ಗ್ರಾಮದ ವೀರಭದ್ರಪ್ಪ ಜಗ್ಗಪ್ಪನವರ ಹೊಲಕ್ಕೆ ಭೇಟಿ ನೀಡಿ, ಮಳೆಯಿಲ್ಲದೇ ಒಣಗಿ ಹೋಗಿರುವ ಮೆಕ್ಕೆಜೋಳ ಪರಿಶೀಲನೆ ನಡೆಸಿದರು.

ನಷ್ಟದ ನಿಖರ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿ ಸರ್ಕಾರಕ್ಕೆ ಸಲ್ಲಿಸಬೇಕು. ನಾವು ಪರಿಶೀಲನೆ ನಡೆಸಿದ ನಂತರ ಸರ್ಕಾರ ದ ಮೇಲೆ ಒತ್ತಡ ಹೇರಿ ರೈತರಿಗೆ ಸೂಕ್ತ ಪರಿಹಾರ ಕೊಡಲು ಶ್ರಮಿಸಲಾಗುವುದು ಎಂದು ಶೆಟ್ಟರ್ ಕೃಷಿ ಅಧಿಕಾರಿಗಳು, ರೈತರಿಗೆ ತಿಳಿಸಿದರು.

ಶಾಸಕರಾದ ಬಿ.ಶ್ರೀರಾಮುಲು, ಎಂ.ಎಸ್. ಸೋಮಲಿಂಗಪ್ಪ, ಹಾಲಪ್ಪ ಆಚಾರ್, ಪಕ್ಷದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮುಖಂಡರಾದ ಭರಮನಗೌಡ, ಅನಂತ ಪದ್ಮನಾಭ, ಕಟಗಿ ರಾಮಕೃಷ್ಣ, ಕವಿರಾಜ್ ಅರಸ್, ಕಿಶೋರ್ ಪತ್ತಿಕೊಂಡ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT