ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಜೆ.ಡಿ.ಎಸ್. ಅಭ್ಯರ್ಥಿಗಳ ಪರವಾಗಿ ಆ ಪಕ್ಷದ ಮುಖಂಡ ದೀಪಕ್ ಕುಮಾರ್ ಸಿಂಗ್ ಅವರು ಸೋಮವಾರ ಬಿರುಸಿನ ಪ್ರಚಾರ ನಡೆಸಿದರು.
1, 2, 4, 6, 8, 10, 19 ಹಾಗೂ 20ನೇ ವಾರ್ಡ್ನಿಂದ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಿದರು.
‘ಈ ಸಲ ಪಕ್ಷ ಗೆಲ್ಲುವ ವಾರ್ಡ್ಗಳಲ್ಲಷ್ಟೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚುತ್ತಿದ್ದಾರೆ. ಹಾಗಾಗಿ ಖಂಡಿತವಾಗಿಯೂ ಚುನಾವಣೆಯಲ್ಲಿ ಬೆಂಬಲಿಸುವ ಭರವಸೆ ಇದೆ’ ಎಂದು ಹೇಳಿದರು.
ಮುಖಂಡರಾದ ಬಾಣದ ಪ್ರಶಾಂತ್, ಬೋಸಯ್ಯ, ನಬಿ ಸಾಬ್, ಹುಲುಗಪ್ಪ, ಶರಣಪ್ಪ, ರಾಜ, ಸಿ.ಆರ್.ಭರತ್ ಕುಮಾರ್ ಇದ್ದರು.