‘ಪಾಲಿಕೆ ರಚನೆಯ ಕರಡು ಪ್ರಸ್ತಾವದಲ್ಲಿ ಕಮಲಾಪುರ ಹೆಸರು ಸೇರ್ಪಡೆಗೊಂಡು ಅದು ಅಂಗೀಕಾರಗೊಂಡರೆ ಪಂಚಾಯಿತಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತದೆ. ಜನಸಾಮಾನ್ಯರ ಮೇಲೆ ಹೆಚ್ಚಿನ ತೆರಿಗೆ ಭಾರ ಬೀಳುತ್ತದೆ. ಪಾಲಿಕೆ ವ್ಯಾಪ್ತಿಗೆ ಸೇರಿದರೆ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಈಗಾಗಲೇ ಪಟ್ಟಣದಲ್ಲಿ ಸಭೆ ಸೇರಿದ ವಿವಿಧ ಸಂಘಟನೆಗಳು ಕೂಡ ಅದಕ್ಕೆ ವಿರೋಧ ವ್ಯಕ್ತಪಡಿಸಿವೆ. ಜನಪ್ರತಿನಿಧಿಗಳಾದ ನಾವು ಅವರ ಭಾವನೆಗೆ ಸ್ಪಂದಿಸುವ ಅಗತ್ಯವಿದೆ’ ಎಂದು ಸೈಯದ್ ಅಮಾನುಲ್ಲಾ ಹೇಳಿದರು.