ಕಂಪ್ಲಿ: ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲ್ಲೂಕು ಸೇರ್ಪಡೆ ಮಾಡದೆ ಇರುವುದನ್ನು ಖಂಡಿಸಿ ಸೋಮವಾರ ಕಂಪ್ಲಿಯಲ್ಲಿ ಬಂದ್, ಪ್ರತಿಭಟನೆ ಆರಂಭವಾಗಿದೆ. ತಾಲ್ಲೂಕು ಹೋರಾಟ ಸಮಿತಿ, ವಿವಿಧ ಪ್ರಗತಿಪರ ಸಂಘಟನೆಗಳು ಭಾಗವಹಿಸಿವೆ.
ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.
ಈ ವೇಳೆ ಶಾಸಕ ಜೆ.ಎನ್. ಗಣೇಶ್ ಮತ್ತು ಬಿಜೆಪಿಯವರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೋಲಿಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಂಡಿತು.
ಡಾ. ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ ಸಭೆ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.