‘ನದಿ ದಡದ ಬಹುತೇಕ ಗ್ರಾಮಗಳ ಜಮೀನುಗಳು ಜಲಾವೃತಗೊಂಡಿವೆ. ಪ್ರವಾಹದಿಂದ ಸಂತ್ರಸ್ತರಾದವರಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ನಿಯಮಗಳ ಅನ್ವಯ ಪರಿಹಾರ ನೀಡಲಾಗುವುದು. ಕಚ್ಚಾ ಮನೆ ಕುಸಿದಿದ್ದರೆ ₹95 ಸಾವಿರ ನೀಡಲಾಗುತ್ತದೆ. ಪ್ರತಿ ಹೆಕ್ಟೆರ್ ಬೆಳೆ ಹಾನಿಗೆ ₹13,500 ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.