ಸಿ.ಪಿ.ಐ. ಸಿದ್ದೇಶ್ವರ, ಪಿ.ಎಸ್.ಐ. ನಿರಂಜನ್ ನೇತೃತ್ವದ ತಂಡ ತನಿಖೆ ನಡೆಸಿ, ದೋಷಾರೋಪಣ ಪತ್ರ ಸಲ್ಲಿಸಿತ್ತು. 36 ಜನ ಸಾಕ್ಷಿ, 51 ದಾಖಲೆ, 22 ವಸ್ತುಗಳನ್ನು ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯದ ಎದುರು ಪ್ರಸ್ತುತಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಕೊಲೆ ನಡೆಸಿರುವುದು ಸಾಬೀತಾಗಿರುವುದರಿಂದ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.