ಸ್ವತಃ ಡಿ.ಕೆ. ಶಿವಕುಮಾರ ಪಕ್ಷದ ಕಾರ್ಯಕರ್ತರೊಬ್ಬರ ಬೈಕ್ ಮೇಲೆ ಬಂದರು. ನಗರದ ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ರೋಟರಿ ವೃತ್ತದ ಮೂಲಕ ಹಾದು ಬಂದ ಅವರು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಪಟಾಕಿ ಸಿಡಿಸಿದರು. ಜಯಘೋಷ ಮುಗಿಲು ಮುಟ್ಟಿತು.