ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ.ಯ. ಗಣೇಶ್ ಗುರುವಾರ ಉಮೇದುವಾರಿಕೆ ಸಲ್ಲಿಸಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ದೊಡ್ಡಮನಿ, ಮುಖಂಡರಾದ ವರುಣ್ ತೋರಣಗಟ್ಟೆ, ರಮೇಶ ರೆಡ್ಡಿ, ಸಂಪತ್ ಕುಮಾರ ಇದ್ದರು.‘ಭ್ರಷ್ಟಾಚಾರ ಮುಕ್ತ ಸಂಘಟನೆ’ಯ ಅಧ್ಯಕ್ಷರಾಗಿರುವ ಗಣೇಶ್ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಕೂಡ ಅವರು ಕಣಕ್ಕಿಳಿದಿದ್ದರು.
ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿ ನಾಲ್ಕು ದಿನಗಳಾಗಿದ್ದು, ಇದುವರೆಗೆ ಐದು ಜನ ನಾಮಪತ್ರ ಸಲ್ಲಿಸಿದ್ದಾರೆ.