<p><strong>ಕೂಡ್ಲಿಗಿ: </strong>ಪಟ್ಟಣದ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದರಿ-50ರಲ್ಲಿ ಮಂಗಳವಾರ ರಾತ್ರಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ನಿರ್ವಾಹಕಶರಣಪ್ಪ ಅವರ ದೇಹ ಹೊಕ್ಕಿದ್ದ ಕಬ್ಬಿಣದ ಸರಳುಗಳನ್ನು 108 ವಾಹನದ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ.</p>.<p>ಕುಷ್ಟಗಿಯಿಂದ ಬೆಂಗಳೂರು ಕಡೆ ಹೊರಟಿದ್ದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಕುಷ್ಟಗಿ ಘಟಕದ ಬಸ್ ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಕೂಡ್ಲಿಗಿ ಕಡೆ ಬರುತ್ತಿದ್ದಾಗ ಅಪಘಾತ ನಡೆದಿದೆ.</p>.<p>ಪಟ್ಟಣ ಹೊರ ವಲಯದಲ್ಲಿ ಶಿವಕುಮಾರ್ ಡಾಬಾ ಬಳಿ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದರಿಂದ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿತ್ತು.</p>.<p>ಲಾರಿಯಲ್ಲಿದ್ದ ಕಬ್ಬಿಣದ ಸರಳುಗಳು ಶರಣಪ್ಪ ಅವರ ಕೈ ಮತ್ತು, ದೇಹವನ್ನು ತೂರಿಕೊಂಡು ಹೊರಬಂದಿದ್ದರಿಂದ ಅವರು ಕದಲಲಾರದ ಪರಿಸ್ಥಿತಿಯಲ್ಲಿದ್ದರು.</p>.<p>108ರ ಸಿಬ್ಬಂದಿ ಹಾಗೂ ಕೂಡ್ಲಿಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಕಬ್ಬಿಣದ ರಾಡನ್ನು ಕತ್ತರಿಸಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.</p>.<p>ಶರಣಪ್ಪ ಅವರೊಂದಿಗೆ ಗಾಯಗೊಂಡಿರುವ ಇಬ್ಬರು ಪ್ರಯಾಣಿಕರು ಹಾಗೂ ಚಾಲಕ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ: </strong>ಪಟ್ಟಣದ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದರಿ-50ರಲ್ಲಿ ಮಂಗಳವಾರ ರಾತ್ರಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ನಿರ್ವಾಹಕಶರಣಪ್ಪ ಅವರ ದೇಹ ಹೊಕ್ಕಿದ್ದ ಕಬ್ಬಿಣದ ಸರಳುಗಳನ್ನು 108 ವಾಹನದ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ.</p>.<p>ಕುಷ್ಟಗಿಯಿಂದ ಬೆಂಗಳೂರು ಕಡೆ ಹೊರಟಿದ್ದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಕುಷ್ಟಗಿ ಘಟಕದ ಬಸ್ ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಕೂಡ್ಲಿಗಿ ಕಡೆ ಬರುತ್ತಿದ್ದಾಗ ಅಪಘಾತ ನಡೆದಿದೆ.</p>.<p>ಪಟ್ಟಣ ಹೊರ ವಲಯದಲ್ಲಿ ಶಿವಕುಮಾರ್ ಡಾಬಾ ಬಳಿ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದರಿಂದ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿತ್ತು.</p>.<p>ಲಾರಿಯಲ್ಲಿದ್ದ ಕಬ್ಬಿಣದ ಸರಳುಗಳು ಶರಣಪ್ಪ ಅವರ ಕೈ ಮತ್ತು, ದೇಹವನ್ನು ತೂರಿಕೊಂಡು ಹೊರಬಂದಿದ್ದರಿಂದ ಅವರು ಕದಲಲಾರದ ಪರಿಸ್ಥಿತಿಯಲ್ಲಿದ್ದರು.</p>.<p>108ರ ಸಿಬ್ಬಂದಿ ಹಾಗೂ ಕೂಡ್ಲಿಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಕಬ್ಬಿಣದ ರಾಡನ್ನು ಕತ್ತರಿಸಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.</p>.<p>ಶರಣಪ್ಪ ಅವರೊಂದಿಗೆ ಗಾಯಗೊಂಡಿರುವ ಇಬ್ಬರು ಪ್ರಯಾಣಿಕರು ಹಾಗೂ ಚಾಲಕ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>