ಬೆಂಗಳೂರು: ಯಲಹಂಕ ಕ್ಷೇತ್ರದ ಹಿರಿಯ ಹಾಗೂ ಯುವ ಮುಖಂಡರು ಒಟ್ಟಾಗಿ ಜೆಡಿಎಸ್ ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಇಲ್ಲಿನ ಅಭ್ಯರ್ಥಿ ಇ.ಕೃಷ್ಣಪ್ಪ ಅವರ ಗೆಲುವು ಖಚಿತ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಯಲಹಂಕ ಉಪನಗರ 5ನೇ ಹಂತದಲ್ಲಿನ ನಿಸರ್ಗ ಉದ್ಯಾನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.
ಇದೇ ವೇಳೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಚಂದ್ರಪ್ಪ, ಕಾಂಗ್ರೆಸ್ ಮುಖಂಡರಾದ ವೈ.ಎನ್.ಅಶ್ವಥ್, ಟಾಟಾ ರಮೇಶ್, ಹೋರಾಟಗಾರ ಆಜಾದ್ ಚಂದ್ರಶೇಖರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.