<p><strong>ಹೊಸಪೇಟೆ (ವಿಜಯನಗರ): </strong>ಶನಿವಾರ ಸಂಜೆ ಇಲ್ಲಿ ನಡೆದ ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ನಿರೀಕ್ಷೆಗೂ ಮೀರಿ ಜನ ಬಂದರು.</p>.<p>ಕಾರ್ಯಕ್ರಮ ವೀಕ್ಷಣೆಗೆ ಪಾಸ್ ಕಡ್ಡಾಯಗೊಳಿಸಲಾಗಿತ್ತು. ಪಾಸು ಇದ್ದವರು ಒಳಗೆ ಬಂದು ಆಸೀನರಾಗಿದ್ದರು. ಆದರೆ, ಪಾಸು ಇರದಿದ್ದವರೂ ಶತಾಯ ಗತಾಯ ಪ್ರಯತ್ನ ಮಾಡಿದರೂ ಪೊಲೀಸರು ಒಳಗೆ ಬಿಡಲಿಲ್ಲ.</p>.<p>ಹಂಪಿ ಮರು ಸೃಷ್ಟಿ ಮಾಡಿ, ದೊಡ್ಡ ವೇದಿಕೆ ನಿರ್ಮಿಸಿದ್ದರಿಂದ ಸಹಜವಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರು. ಆದರೆ, ಪಾಸ್ ಇರದಿದ್ದವರಿಗೆ ಪ್ರವೇಶ ಸಿಗಲಿಲ್ಲ. ವಿಷಯ ತಿಳಿದು ಕೆಲವರು ಸಪ್ಪೆ ಮುಖ ಮಾಡಿ ಹಿಂತಿರುಗಿದರು. ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಳಿಕ ಹೊರಟರು.</p>.<p>ಕಾರ್ಯಕ್ರಮ ವೀಕ್ಷಣೆಗೆ ಎರಡು ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿತ್ತು. ಆದರೆ, ಅದಕ್ಕೂ ನಾಲ್ಕೈದು ಪಟ್ಟು ಹೆಚ್ಚಿಗೆ ಜನ ಸೇರಿದ್ದರು. ರಸ್ತೆಯ ಇಕ್ಕೆಲ, ಕಟ್ಟಡಗಳ ಮೇಲೆ ನಿಂತು ಕೆಲವರು ಕಾರ್ಯಕ್ರಮ ಕಣ್ತುಂಬಿಕೊಂಡರು.</p>.<p>₹ 5 ಕೋಟಿ ಖರ್ಚು ಮಾಡಿ ಇಷ್ಟೊಂದು ಅದ್ದೂರಿಯಾಗಿ ಮಾಡುತ್ತಿರುವ ಕಾರ್ಯಕ್ರಮವನ್ನು ಜನಸಾಮಾನ್ಯರನ್ನು ಹೊರಗಿಟ್ಟು ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಶನಿವಾರ ಸಂಜೆ ಇಲ್ಲಿ ನಡೆದ ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ನಿರೀಕ್ಷೆಗೂ ಮೀರಿ ಜನ ಬಂದರು.</p>.<p>ಕಾರ್ಯಕ್ರಮ ವೀಕ್ಷಣೆಗೆ ಪಾಸ್ ಕಡ್ಡಾಯಗೊಳಿಸಲಾಗಿತ್ತು. ಪಾಸು ಇದ್ದವರು ಒಳಗೆ ಬಂದು ಆಸೀನರಾಗಿದ್ದರು. ಆದರೆ, ಪಾಸು ಇರದಿದ್ದವರೂ ಶತಾಯ ಗತಾಯ ಪ್ರಯತ್ನ ಮಾಡಿದರೂ ಪೊಲೀಸರು ಒಳಗೆ ಬಿಡಲಿಲ್ಲ.</p>.<p>ಹಂಪಿ ಮರು ಸೃಷ್ಟಿ ಮಾಡಿ, ದೊಡ್ಡ ವೇದಿಕೆ ನಿರ್ಮಿಸಿದ್ದರಿಂದ ಸಹಜವಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರು. ಆದರೆ, ಪಾಸ್ ಇರದಿದ್ದವರಿಗೆ ಪ್ರವೇಶ ಸಿಗಲಿಲ್ಲ. ವಿಷಯ ತಿಳಿದು ಕೆಲವರು ಸಪ್ಪೆ ಮುಖ ಮಾಡಿ ಹಿಂತಿರುಗಿದರು. ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಳಿಕ ಹೊರಟರು.</p>.<p>ಕಾರ್ಯಕ್ರಮ ವೀಕ್ಷಣೆಗೆ ಎರಡು ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿತ್ತು. ಆದರೆ, ಅದಕ್ಕೂ ನಾಲ್ಕೈದು ಪಟ್ಟು ಹೆಚ್ಚಿಗೆ ಜನ ಸೇರಿದ್ದರು. ರಸ್ತೆಯ ಇಕ್ಕೆಲ, ಕಟ್ಟಡಗಳ ಮೇಲೆ ನಿಂತು ಕೆಲವರು ಕಾರ್ಯಕ್ರಮ ಕಣ್ತುಂಬಿಕೊಂಡರು.</p>.<p>₹ 5 ಕೋಟಿ ಖರ್ಚು ಮಾಡಿ ಇಷ್ಟೊಂದು ಅದ್ದೂರಿಯಾಗಿ ಮಾಡುತ್ತಿರುವ ಕಾರ್ಯಕ್ರಮವನ್ನು ಜನಸಾಮಾನ್ಯರನ್ನು ಹೊರಗಿಟ್ಟು ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>