ಬೆಳಿಗ್ಗೆಯಿಂದ ಸಂಜೆ ವರೆಗೆ ಪ್ರವಾಸಿಗರು, ಅವರ ವಾಹನಗಳ ದಟ್ಟಣೆ ಕಂಡು ಬಂತು. ವಿರೂಪಾಕ್ಷೇಶ್ವರ ದೇವಸ್ಥಾನ, ತುಂಗಭದ್ರಾ ನದಿ ಸ್ನಾನಘಟ್ಟ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಕಡಲೆಕಾಳು–ಸಾಸಿವೆಕಾಳು ಗಣಪ ಸ್ಮಾರಕ, ಉಗ್ರ ನರಸಿಂಹ, ಕಮಲ ಮಹಲ್, ಆನೆಸಾಲು ಮಂಟಪ, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಟ್ಟು ಕಣ್ತುಂಬಿಕೊಂಡರು.