<p><strong>ಹೊಸಪೇಟೆ: </strong>ವಿಜಯನಗರ ಜಿಲ್ಲೆ ಮಾಡಬೇಕೆಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಂತರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ‘ಹನ್ನೊಂದು ತಾಲ್ಲೂಕುಗಳನ್ನು ಒಳಗೊಂಡಿರುವ ಬಳ್ಳಾರಿ ವಿಶಾಲವಾದ ಜಿಲ್ಲೆಯಾಗಿದೆ. ಜನರ ಹಿತದೃಷ್ಟಿ, ಆಡಳಿತದ ಅನುಕೂಲಕ್ಕಾಗಿ ಅದನ್ನು ವಿಭಜಿಸಿ, ವಿಜಯನಗರ ಜಿಲ್ಲೆ ಮಾಡಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.</p>.<p>‘ಪ್ರತ್ಯೇಕ ಜಿಲ್ಲೆಗಾಗಿ 2007ರಿಂದ ಪಶ್ಚಿಮ ತಾಲ್ಲೂಕುಗಳಲ್ಲಿ ಧರಣಿ, ಸತ್ಯಾಗ್ರಹಗಳು ನಡೆಯುತ್ತಿವೆ. ಈಗ ಜಿಲ್ಲೆ ಅಸ್ತಿತ್ವಕ್ಕೆ ಬರಲು ಕಾಲ ಕೂಡಿ ಬಂದಿದೆ. ಈ ಹಿಂದೆ ನೀವು ಮುಖ್ಯಮಂತ್ರಿಗಳಾಗಿದ್ದಾಗ ಮನವಿ ಸಲ್ಲಿಸಿದ್ದೆವು. ಈಗ ಪುನಃ ನೀವೇ ಸಿ.ಎಂ. ಆಗಿದ್ದು, ನಿಮ್ಮ ಅವಧಿಯಲ್ಲಿ ಹೊಸ ಜಿಲ್ಲೆ ರಚನೆಯಾದರೆ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ’ ಎಂದು ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.</p>.<p>ಸಂಘದ ತಾಲ್ಲೂಕು ಅಧ್ಯಕ್ಷ ಟಿ. ಹನುಮಂತಪ್ಪ, ಕಾರ್ಯದರ್ಶಿ ಜಿ. ಕೊಟ್ರಗೌಡ, ಜಂಟಿ ಕಾರ್ಯದರ್ಶಿ ಹಾಜಿ ರಫಿಯಾ ಜಬೀನ್, ಉಪಾಧ್ಯಕ್ಷ ಕಲ್ಲಂ ಭಟ್, ಖಜಾಂಚಿ ಎಂ. ನೀಲಕಂಠಯ್ಯ, ವಕೀಲ ಗುಜ್ಜಲ್ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ವಿಜಯನಗರ ಜಿಲ್ಲೆ ಮಾಡಬೇಕೆಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಂತರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ‘ಹನ್ನೊಂದು ತಾಲ್ಲೂಕುಗಳನ್ನು ಒಳಗೊಂಡಿರುವ ಬಳ್ಳಾರಿ ವಿಶಾಲವಾದ ಜಿಲ್ಲೆಯಾಗಿದೆ. ಜನರ ಹಿತದೃಷ್ಟಿ, ಆಡಳಿತದ ಅನುಕೂಲಕ್ಕಾಗಿ ಅದನ್ನು ವಿಭಜಿಸಿ, ವಿಜಯನಗರ ಜಿಲ್ಲೆ ಮಾಡಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.</p>.<p>‘ಪ್ರತ್ಯೇಕ ಜಿಲ್ಲೆಗಾಗಿ 2007ರಿಂದ ಪಶ್ಚಿಮ ತಾಲ್ಲೂಕುಗಳಲ್ಲಿ ಧರಣಿ, ಸತ್ಯಾಗ್ರಹಗಳು ನಡೆಯುತ್ತಿವೆ. ಈಗ ಜಿಲ್ಲೆ ಅಸ್ತಿತ್ವಕ್ಕೆ ಬರಲು ಕಾಲ ಕೂಡಿ ಬಂದಿದೆ. ಈ ಹಿಂದೆ ನೀವು ಮುಖ್ಯಮಂತ್ರಿಗಳಾಗಿದ್ದಾಗ ಮನವಿ ಸಲ್ಲಿಸಿದ್ದೆವು. ಈಗ ಪುನಃ ನೀವೇ ಸಿ.ಎಂ. ಆಗಿದ್ದು, ನಿಮ್ಮ ಅವಧಿಯಲ್ಲಿ ಹೊಸ ಜಿಲ್ಲೆ ರಚನೆಯಾದರೆ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ’ ಎಂದು ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.</p>.<p>ಸಂಘದ ತಾಲ್ಲೂಕು ಅಧ್ಯಕ್ಷ ಟಿ. ಹನುಮಂತಪ್ಪ, ಕಾರ್ಯದರ್ಶಿ ಜಿ. ಕೊಟ್ರಗೌಡ, ಜಂಟಿ ಕಾರ್ಯದರ್ಶಿ ಹಾಜಿ ರಫಿಯಾ ಜಬೀನ್, ಉಪಾಧ್ಯಕ್ಷ ಕಲ್ಲಂ ಭಟ್, ಖಜಾಂಚಿ ಎಂ. ನೀಲಕಂಠಯ್ಯ, ವಕೀಲ ಗುಜ್ಜಲ್ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>