ಗುಡ್ಡದ ಮೇಲೆ ಶುಕ್ರವಾರ ಸಂಜೆ ಮೊದಲ ಸಲ ಚಿರತೆ ಕಾಣಿಸಿಕೊಂಡಿತ್ತು. ಕೂಡಲೇ ಡಿಎಫ್ಒ ಸಂದೀಪ್ ರಾವ್ ಸೂರ್ಯವಂಶಿ, ಆರ್ಎಫ್ಒ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆಗೆ ಅರಣ್ಯ ಸಿಬ್ಬಂದಿ ತಂಡ ರಚಿಸಿದರು. ಈ ತಂಡ ನಾಲ್ಕು ದಿನಗಳಿಂದ ಶೋಧ ನಡೆಸಿದೆ. ರಾತ್ರಿ ಹೊತ್ತಿನಲ್ಲಿ ಕಾಣುವ ಕ್ಯಾಮರಾ ತರಿಸಲಾಗಿದೆ. ಡ್ರೋಣ್ ಕ್ಯಾಮರಾ ನೆರವೂ ಪಡೆಯಲಾಗಿದೆ.