ಕಂಪ್ಲಿ ತಾಲ್ಲೂಕಿನ ದೇವಲಾಪುರ ಗ್ರಾಮದ ರಾಜನಮಟ್ಟಿಯಲ್ಲಿ ಮಂಗಳವಾರ ಚಿರತೆ ಬೋನಿಗೆ ಬಿದ್ದಿತ್ತು. ಕಂಪ್ಲಿ ತಾಲ್ಲೂಕುವೊಂದರಲ್ಲೇ ನವೆಂಬರ್ನಿಂದ ಇದುವರೆಗೆ ಒಟ್ಟು ಐದು ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದರೆ, ಸಂಡೂರಿನಲ್ಲಿ ಇತ್ತೀಚೆಗೆ ಚಿರತೆಯೊಂದನ್ನು ಸೆರೆ ಹಿಡಿದಿದ್ದರು. ಹೀಗೆ ಜಿಲ್ಲೆಯಲ್ಲಿ ಒಟ್ಟು ಏಳು ಚಿರತೆಗಳನ್ನು ಹಿಡಿದಿರುವ ಅರಣ್ಯ ಇಲಾಖೆ ಅವುಗಳನ್ನು ಬೇರೆಡೆ ಸ್ಥಳಾಂತರಿಸಿದೆ. ಸದ್ಯ ಚಿರತೆ ಸೆರೆ ಸಿಕ್ಕಿರುವ ಭಾಗದ ಗ್ರಾಮಸ್ಥರು ಆತಂಕದಿಂದ ಹೊರಬಂದಿದ್ದಾರೆ.