‘ಪ್ರತಿಯೊಬ್ಬರೂ ಅವರವರ ಮನೆಗಳಲ್ಲೇ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಇಷ್ಟಲಿಂಗ ಪೂಜೆ ಮಾಡಿಕೊಳ್ಳಬೇಕು. ಮಠದಲ್ಲೂ ಇದೇ ರೀತಿ ಸರಳವಾಗಿ ಜಯಂತಿ ಆಚರಿಸಲಾಗುವುದು. ಸರ್ಕಾರ ಜಾರಿಗೆ ತಂದಿರುವ ಲಾಕ್ಡೌನ್ ಅನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಅಧ್ಯಕ್ಷ ಶರಣು ಸ್ವಾಮಿ, ಕಾರ್ಯದರ್ಶಿ ರವಿಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.