ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ. ಅದೇ ರೀತಿ ಲವ್ ಜಿಹಾದ್ ಕಾನೂನು ಕೂಡ ಜಾರಿಗೆ ತರಲಾಗುವುದು. ಇದು ಜಾತ್ಯಾತೀತ ರಾಷ್ಟ್ರ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನ ಒಪ್ಪಿಕೊಂಡಿದ್ದೇವೆ. ಆದರೆ, ಹಿಂದೂ ಸಂಸ್ಕೃತಿಯ ದೇಶ, ಹಿಂದೂ ದೇಶ’ ಎಂದರು.