ಹೊಸಪೇಟೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯದರ್ಶಿಯಾಗಿ ಇಲ್ಲಿನ ಕೆ. ಮಹೇಶ್ ಕುಮಾರ ನೇಮಕಗೊಂಡಿದ್ದಾರೆ.
‘ಪಕ್ಷ ವಹಿಸಿರುವ ಹೊಣೆಗಾರಿಕೆಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿ, ಪರಿಣಾಮಕಾರಿಯಾಗಿ ಪ್ರಚಾರ ಕೈಗೊಂಡು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು’ ಎಂದು ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಸೂಚಿಸಿದ್ದಾರೆ.