‘ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 27ರಷ್ಟಿರುವ ಎಸ್ಸಿ/ಎಸ್ಟಿ ಸಮುದಾಯದವರು ಇಂದಿಗೂ ಸ್ವಂತ ಮನೆ, ಉದ್ಯೋಗ, ಭೂಮಿ ಹೊಂದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಹಸಿವು, ಬಡತನ, ನಿರುದ್ಯೋಗ, ಅನಾರೋಗ್ಯ, ಅನಕ್ಷರತೆಯಂತಹ ಜ್ವಲಂತ ಸಮಸ್ಯೆಗಳು ಈಗಲೂ ಹಾಗೆಯೇ ಉಳಿದುಕೊಂಡಿವೆ. ಕಾರ್ಪೊರೇಟ್ ಕಂಪನಿಗಳಿಗೆ ಹತ್ತಾರು ಸಾವಿರ ಎಕರೆ ಜಮೀನು ಕೊಡುವ ಸರ್ಕಾರಗಳು ಬಡವರಿಗೆ ಒಂದು ಸಣ್ಣ ಸೂರು ಕಟ್ಟಿಸಿಕೊಡುತ್ತಿಲ್ಲ’ ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಎಂ. ಜಂಬಯ್ಯ ನಾಯಕ ದೂರಿದರು.