ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌ ಭೀತಿಯಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

Last Updated 31 ಮಾರ್ಚ್ 2020, 11:28 IST
ಅಕ್ಷರ ಗಾತ್ರ

ಕೊಟ್ಟೂರು: ಕೊರೊನಾ ಸೊಂಕು ಬಂದಿದೆ ಎಂದು ಮನನೊಂದು 62 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ‌ ಅಲೂಬೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಕಳೆದ ಒಂದು ವಾರಗಳಿಂದ ಮೃತ ವ್ಯಕ್ತಿ ತನಗೆ ಕೊರೊನಾ ಇದೆ ಎಂದು ಭಾವಿಸಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ. ಖಿನ್ನತೆಯಲ್ಲಿ ಎಲ್ಲೆಲ್ಲೂ ಸುತ್ತಿದ್ದು, ಮನೆಯಲ್ಲಿಯೂ ಮಕ್ಕಳು, ಮೊಮ್ಮಕ್ಕಳ ಬಳಿ ದೂರದಿಂದ ಮಾತನಾಡುತ್ತಿರುವುದಾಗಿ ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ಊರು ತೊರೆದಿದ್ದ ಅವರು ಇಂದು ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ವ್ಯಕ್ತಿಗೆ ಯಾವುದೇ ಸೊಂಕು ಇರಲಿಲ್ಲ. ಮಾನಸಿಕವಾಗಿ ಖಿನ್ನತೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಹಶೀಲ್ದಾರ್ ಜಿ ಅನಿಲ್ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT