ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಬಾಚುವ ಕಾರ್ಮಿಕರಿಗೆ ಪುನರ್ವಸತಿ ಶಿಬಿರ

Last Updated 9 ಫೆಬ್ರುವರಿ 2021, 13:12 IST
ಅಕ್ಷರ ಗಾತ್ರ

ಹೊಸಪೇಟೆ: ಗ್ರಾಮ ಪಂಚಾಯಿತಿಗಳಲ್ಲಿ ಈ ಹಿಂದೆ ಮಲಬಾಚುವ ಕೆಲಸ ಮಾಡುತ್ತಿದ್ದವರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳು ಹಾಗೂ ಪುನರ್ವಸತಿ ಶಿಬಿರ ಮಂಗಳವಾರ ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಮಾತನಾಡಿ, ‘ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಹತ್ತು ಜನ ಮಲಬಾಚುವ ಕಾಯಕ ಮಾಡುತ್ತಿದ್ದವರು ಹಾಗೂ ಅವರ ಅವಲಂಬಿತರನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ’ ಎಂದರು.

‘ಸಮಾಜ ಕಲ್ಯಾಣ ಇಲಾಖೆಯಿಂದ ಅವರ ಮಕ್ಕಳಿಗೆ ಮೊರಾರ್ಜಿ ಸೇರಿದಂತೆ ವಿವಿಧ ವಸತಿ, ವಿದ್ಯಾರ್ಥಿ ನಿಲಯಗಳಲ್ಲಿ ಉಚಿತ ಪ್ರವೇಶ ದೊರಕಿಸಿಕೊಡಲಾಗಿದೆ. ₹3 ಸಾವಿರ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಕುಟುಂಬದಲ್ಲಿನ ನಿರುದ್ಯೋಗಿಗಳಿಗೆ ವ್ಯಾಪಾರ ಕಲ್ಪಿಸಲು ₹1 ಲಕ್ಷ ನೇರ ಸಾಲ ಒದಗಿಸಲಾಗುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಶಿಬಿರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಶೋಕ್ ತೋಟದ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಉಮೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಸಂತ್ ಕುಮಾರ್, ಸಂಪನ್ಮೂಲ ವ್ಯಕ್ತಿ ರಾಮಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT