ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀರಲ ದೇವರ ದರ್ಶನಕ್ಕೆ ಜನದಟ್ಟಣೆ

Last Updated 10 ಸೆಪ್ಟೆಂಬರ್ 2019, 12:58 IST
ಅಕ್ಷರ ಗಾತ್ರ

ಹೊಸಪೇಟೆ: ಮೊಹರಂ ಪ್ರಯುಕ್ತ ಇಲ್ಲಿನ ರಾಮಲಿ ಸ್ವಾಮಿ ಮಸೀದಿ ಬಳಿ ಪ್ರತಿಷ್ಠಾಪಿಸಿರುವ ಪೀರಲ ದೇವರ ದರ್ಶನಕ್ಕೆ ಮಂಗಳವಾರ ನೂರಾರು ಸಂಖ್ಯೆಯಲ್ಲಿ ಜನ ಬಂದಿದ್ದರು.

ನಾಲ್ಕು ತಿಂಗಳ ಹಿಂದೆ ಪೀರಲ ದೇವರನ್ನು ಪ್ರತಿಷ್ಠಾಪಿಸಲಾಗಿದೆ. ಇಡೀ ಪರಿಸರವನ್ನು ತಳಿರು ತೋರಣದಿಂದ ಅಲಂಕರಿಸಲಾಗಿದೆ. ಮಸೀದಿಗೆ ವಿದ್ಯುದ್ದೀಪಲಂಕಾರ ಮಾಡಲಾಗಿದೆ. ನಿತ್ಯ ವಿವಿಧ ಕಡೆಗಳಿಂದ ಜನ ಬಂದು ಹೋಗುತ್ತಿದ್ದಾರೆ.

ಮಂಗಳವಾರ ತಡರಾತ್ರಿ ಪೀರಲ ದೇವರ ಮೆರವಣಿಗೆ ಮಾಡಲಾಗುತ್ತದೆ. ಕೊನೆಯ ದಿನವಾಗಿರುವ ಕಾರಣ ಮಂಗಳವಾರ ದಿನವಿಡೀ ಜನದಟ್ಟಣೆ ಕಂಡು ಬಂತು. ಜನ ಸರತಿ ಸಾಲಿನಲ್ಲಿ ನಿಂತು ಪೀರಲ ದರ್ಶನ ಮಾಡಿದರು.ಹಿಂದೂ, ಮುಸ್ಲಿಮ ಸಮುದಾಯದ ಇಬ್ಬರೂ ಒಟ್ಟಿಗೆ ಪೀರಲ ದೇವರಿಗೆ ಹೂ, ನೈವೇದ್ಯ ಸಮರ್ಪಿಸಿ, ಭಾವೈಕ್ಯತೆ ಮೆರೆದರು.ಕೆಲವರು ಹುಲಿ ವೇಷ ಧರಿಸಿ, ಕುಣಿದು ಹರಕೆ ತೀರಿಸಿದರು.

ಮಸೀದಿಯ ಪರಿಸರದಲ್ಲಿ ಜಾತ್ರೆಯ ವಾತಾವರಣ ಇತ್ತು.ಮುಖ್ಯರಸ್ತೆಗೆ ಹೊಂದಿಕೊಂಡಂತೆ ಮಸೀದಿ ಇರುವ ಕಾರಣ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT