<p><strong>ವಿಜಯನಗರ (ಹೊಸಪೇಟೆ):</strong> ನಗರದ ಶಂಕರ್ ಆನಂದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಉದ್ಯೋಗ ಮೇಳಕ್ಕೆ ಬಂದಿದ್ದ ನೂರಾರು ಅಭ್ಯರ್ಥಿಗಳು ಉರಿ ಬಿಸಿಲು ಲೆಕ್ಕಿಸದೆ ನೋಂದಣಿಗಾಗಿ ತಡಹೊತ್ತು ಸರದಿ ಸಾಲಿನಲ್ಲಿ ನಿಂತಿದ್ದರು.</p>.<p>‘ನ್ಯಾಷನಲ್ ಕೆರಿಯರ್ ಸ್ಕೀಮ್’ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 18 ಖಾಸಗಿ ಕಂಪೆನಿಗಳು ಸಂದರ್ಶನ ಏರ್ಪಡಿಸಿದ್ದವು.</p>.<p>ಬೆಳಿಗ್ಗೆಯಿಂದಲೇ ಕಾಲೇಜಿನ ಆವರಣದಲ್ಲಿ ಜಮಾಯಿಸಿದ್ದ ಅಭ್ಯರ್ಥಿಗಳು ಆವರಣದಲ್ಲಿದ್ದ ಹಾಕಲಾಗಿದ್ದ ಸೂಚನಾ ಫಲಕಗಳಲ್ಲಿ ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗಗಳ ವಿವರವನ್ನು ಹುಡುಕುವುದರಲ್ಲಿ ನಿರತರಾಗಿದ್ದರು.</p>.<p>ಸಂದರ್ಶನಕ್ಕೂ ಮುನ್ನ ಆರಂಭಗೊಂಡ ನೋಂದಣಿ ಪ್ರಕ್ರಿಯೆಗೆ ಬಿಸಿಲನ್ನೂ ಲೆಕ್ಕಿಸದೇ ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅಭ್ಯರ್ಥಿಗಳ ಜೊತೆಗೆ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಸಂದರ್ಶನದ ಅನುಭವಕ್ಕಾಗಿ ಹಾಗೂ ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿದ್ದು ವಿಶೇಷವಾಗಿತ್ತು.</p>.<p>ಉದ್ಯೋಗ ಮೇಳದ ಉದ್ಘಾಟಿಸಿದ ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ, ‘ಕೋವಿಡ್ ಲಾಕ್ಡೌನ್ ನಂತರ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ವಿದ್ಯಾಭ್ಯಾಸ ಪೂರ್ಣಗೊಳಿಸಿದ ಎಲ್ಲರಿಗೂ ಸರ್ಕಾರಿ ನೌಕರಿ ಕೊಡಲು ಸಾಧ್ಯವಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಹುದ್ದೆಗಳಿಗೆ ಸ್ಪರ್ಧೆಯು ಹೆಚ್ಚಿರುತ್ತದೆ’ ಎಂದರು.</p>.<p>‘ಶೇ 20ರಿಂದ 30 ರಷ್ಟು ಮಾತ್ರ ಸರ್ಕಾರಿ ಹುದ್ದೆಗಳಿವೆ. ಉಳಿದವು ಖಾಸಗಿ ಕ್ಷೇತ್ರದ ಉದ್ಯೋಗಗಳಾಗಿವೆ. ಉದ್ಯೋಗ ಮೇಳಕ್ಕೆ ಬಂದಿರುವ 18 ಕಂಪೆನಿಗಳಲ್ಲಿ 500ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿವೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ ಮಾತನಾಡಿ, ‘ಕಾಲೇಜಿನಲ್ಲಿ ಎರಡನೇ ಬಾರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಗಿಟ್ಟಿಸುವುದು ಮುಖ್ಯವಲ್ಲ. ನೌಕರಿ ಸಿಕ್ಕ ನಂತರ ಪ್ರಾಮಾಣಿಕತೆ, ಬದ್ಧತೆಯಿಂದ ಕೆಲಸ ನಿರ್ವಹಿಸುವುದು ಬಹಳ ಮುಖ್ಯವಾದುದು’ ಎಂದು ಹೇಳಿದರು.</p>.<p>ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಸಮುದಾಯ ಸಂಘಟನಾ ಅಧಿಕಾರಿ ಎ.ರವಿಕುಮಾರ್, ಸಂದೀಪ್ ಸಿಂಗ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಯು.ರಾಘವೇಂದ್ರ, ಚಿನ್ನಿ ರಾಮ್ ಕುಮಾರ್, ಮಧುರಚೆನ್ನ ಶಾಸ್ತ್ರಿ ಇದ್ದರು.</p>.<p>***</p>.<p><strong>ಕೋವಿಡ್ ಲಾಕ್ಡೌನ್ ನಂತರ ಉದ್ಯೋಗ ಅವಕಾಶಗಳು ಕಡಿಮೆಯಾಗಿದ್ದು, ಇಂತಹ ಉದ್ಯೋಗ ಮೇಳವನ್ನು ಆಯೋಜಿಸುವುದರಿಂದ ಉಪಯೋಗವಾಗುತ್ತದೆ.<br />-ಮೌನ, ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿನಿ</strong></p>.<p>***</p>.<p><strong>ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂತಹ ಉದ್ಯೋಗ ಮೇಳಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲು ಅನುಕೂಲವಾಗಬಹುದು.<br />-ಎ.ಕುಮಾರ್, ಉದ್ಯೋಗ ಆಕಾಂಕ್ಷಿ</strong></p>.<p><strong>/ಅಂಕಿ ಅಂಶ/<br />ಒಟ್ಟು ನೋದಣಿ 969<br />ಪುರುಷ ಅಭ್ಯರ್ಥಿಗಳು 617<br />ಮಹಿಳಾ ಅಭ್ಯರ್ಥಿಗಳು 352<br />ಸಂದರ್ಶನ ಮಾಡಿದ ಸಂಸ್ಥೆಗಳು 18<br />ಸಂದರ್ಶನಕ್ಕೆ ಆಯ್ಕೆಗೊಂಡವರು 110</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ):</strong> ನಗರದ ಶಂಕರ್ ಆನಂದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಉದ್ಯೋಗ ಮೇಳಕ್ಕೆ ಬಂದಿದ್ದ ನೂರಾರು ಅಭ್ಯರ್ಥಿಗಳು ಉರಿ ಬಿಸಿಲು ಲೆಕ್ಕಿಸದೆ ನೋಂದಣಿಗಾಗಿ ತಡಹೊತ್ತು ಸರದಿ ಸಾಲಿನಲ್ಲಿ ನಿಂತಿದ್ದರು.</p>.<p>‘ನ್ಯಾಷನಲ್ ಕೆರಿಯರ್ ಸ್ಕೀಮ್’ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 18 ಖಾಸಗಿ ಕಂಪೆನಿಗಳು ಸಂದರ್ಶನ ಏರ್ಪಡಿಸಿದ್ದವು.</p>.<p>ಬೆಳಿಗ್ಗೆಯಿಂದಲೇ ಕಾಲೇಜಿನ ಆವರಣದಲ್ಲಿ ಜಮಾಯಿಸಿದ್ದ ಅಭ್ಯರ್ಥಿಗಳು ಆವರಣದಲ್ಲಿದ್ದ ಹಾಕಲಾಗಿದ್ದ ಸೂಚನಾ ಫಲಕಗಳಲ್ಲಿ ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗಗಳ ವಿವರವನ್ನು ಹುಡುಕುವುದರಲ್ಲಿ ನಿರತರಾಗಿದ್ದರು.</p>.<p>ಸಂದರ್ಶನಕ್ಕೂ ಮುನ್ನ ಆರಂಭಗೊಂಡ ನೋಂದಣಿ ಪ್ರಕ್ರಿಯೆಗೆ ಬಿಸಿಲನ್ನೂ ಲೆಕ್ಕಿಸದೇ ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅಭ್ಯರ್ಥಿಗಳ ಜೊತೆಗೆ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಸಂದರ್ಶನದ ಅನುಭವಕ್ಕಾಗಿ ಹಾಗೂ ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿದ್ದು ವಿಶೇಷವಾಗಿತ್ತು.</p>.<p>ಉದ್ಯೋಗ ಮೇಳದ ಉದ್ಘಾಟಿಸಿದ ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ, ‘ಕೋವಿಡ್ ಲಾಕ್ಡೌನ್ ನಂತರ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ವಿದ್ಯಾಭ್ಯಾಸ ಪೂರ್ಣಗೊಳಿಸಿದ ಎಲ್ಲರಿಗೂ ಸರ್ಕಾರಿ ನೌಕರಿ ಕೊಡಲು ಸಾಧ್ಯವಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಹುದ್ದೆಗಳಿಗೆ ಸ್ಪರ್ಧೆಯು ಹೆಚ್ಚಿರುತ್ತದೆ’ ಎಂದರು.</p>.<p>‘ಶೇ 20ರಿಂದ 30 ರಷ್ಟು ಮಾತ್ರ ಸರ್ಕಾರಿ ಹುದ್ದೆಗಳಿವೆ. ಉಳಿದವು ಖಾಸಗಿ ಕ್ಷೇತ್ರದ ಉದ್ಯೋಗಗಳಾಗಿವೆ. ಉದ್ಯೋಗ ಮೇಳಕ್ಕೆ ಬಂದಿರುವ 18 ಕಂಪೆನಿಗಳಲ್ಲಿ 500ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿವೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ ಮಾತನಾಡಿ, ‘ಕಾಲೇಜಿನಲ್ಲಿ ಎರಡನೇ ಬಾರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಗಿಟ್ಟಿಸುವುದು ಮುಖ್ಯವಲ್ಲ. ನೌಕರಿ ಸಿಕ್ಕ ನಂತರ ಪ್ರಾಮಾಣಿಕತೆ, ಬದ್ಧತೆಯಿಂದ ಕೆಲಸ ನಿರ್ವಹಿಸುವುದು ಬಹಳ ಮುಖ್ಯವಾದುದು’ ಎಂದು ಹೇಳಿದರು.</p>.<p>ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಸಮುದಾಯ ಸಂಘಟನಾ ಅಧಿಕಾರಿ ಎ.ರವಿಕುಮಾರ್, ಸಂದೀಪ್ ಸಿಂಗ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಯು.ರಾಘವೇಂದ್ರ, ಚಿನ್ನಿ ರಾಮ್ ಕುಮಾರ್, ಮಧುರಚೆನ್ನ ಶಾಸ್ತ್ರಿ ಇದ್ದರು.</p>.<p>***</p>.<p><strong>ಕೋವಿಡ್ ಲಾಕ್ಡೌನ್ ನಂತರ ಉದ್ಯೋಗ ಅವಕಾಶಗಳು ಕಡಿಮೆಯಾಗಿದ್ದು, ಇಂತಹ ಉದ್ಯೋಗ ಮೇಳವನ್ನು ಆಯೋಜಿಸುವುದರಿಂದ ಉಪಯೋಗವಾಗುತ್ತದೆ.<br />-ಮೌನ, ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿನಿ</strong></p>.<p>***</p>.<p><strong>ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂತಹ ಉದ್ಯೋಗ ಮೇಳಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲು ಅನುಕೂಲವಾಗಬಹುದು.<br />-ಎ.ಕುಮಾರ್, ಉದ್ಯೋಗ ಆಕಾಂಕ್ಷಿ</strong></p>.<p><strong>/ಅಂಕಿ ಅಂಶ/<br />ಒಟ್ಟು ನೋದಣಿ 969<br />ಪುರುಷ ಅಭ್ಯರ್ಥಿಗಳು 617<br />ಮಹಿಳಾ ಅಭ್ಯರ್ಥಿಗಳು 352<br />ಸಂದರ್ಶನ ಮಾಡಿದ ಸಂಸ್ಥೆಗಳು 18<br />ಸಂದರ್ಶನಕ್ಕೆ ಆಯ್ಕೆಗೊಂಡವರು 110</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>