ಕೂಡ್ಲಿಗಿ: ತಾಲ್ಲೂಕಿನ ಚೌಡಾಪುರ ಕೆರೆಯಲ್ಲಿ ಬುಧವಾರ ನರೇಗಾ ಕಾಮಗಾರಿಯಲ್ಲಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕ ಬಾರಿಕರ ಪಂಪಣ್ಣ (46) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನರೇಗಾ ಯೋಜನೆಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಯುನ್ನು ಸ್ಥಳೀಯ ಗ್ರಾಮ ಪಂಚಾಯ್ತಿಯಿಂದ ಮಂಗಳವಾರದಿಂದ ಆರಂಭಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಪಂಪಣ್ಣ ಕೆಲಸದಲ್ಲಿ ತೊಡಗಿದ್ದಾಗ ತೀವ್ರ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.