ಬಳ್ಳಾರಿ: ರಾಜ್ಯ ಸರ್ಕಾರ ತೈಲದ ಮೇಲೆ ಸೇಸ್ ಹೆಚ್ಚಳ ಹಾಗೂ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಬೆಜೆಪಿಯಿಂದ ನಗರದ ಗಡಿಗಿ ಚಿಕ್ಕ ಚೆನ್ನಪ್ಪ ವೃತ್ತದಲ್ಲಿ ಭಾನುವಾರ ಪ್ರತಿಭಟಿಸಿದರು.
ಶಾಸಕ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿದ್ದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ , ಜೆಡಿಎಸ್ ನ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.