<p><strong>ಹೊಸಪೇಟೆ</strong>: ಮಂಗಳವಾರ ಸಂಜೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಅಲ್ಲಿನ ಅಸ್ವಚ್ಛತೆ ನೋಡಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು.</p>.<p>ಸೂಕ್ತ ನಿರ್ವಹಣೆ ಇಲ್ಲದೆ ಆಸ್ಪತ್ರೆಯ ಹಿಂಬದಿಯಲ್ಲಿ ನಿಂತಿದ್ದ ಐದು ಆಂಬುಲೆನ್ಸ್ ಚಾಲಕರನ್ನು ತರಾಟೆಗೆ ತೆಗೆದುಕೊಂಡರು.</p>.<p>ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಬಳಿಕ ಆಸ್ಪತ್ರೆಯ ವೀಕ್ಷಣೆ ಮಾಡಿದರು. ಆಸ್ಪತ್ರೆಯ ಇಡೀ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.</p>.<p>‘ಇಡೀ ಆಸ್ಪತ್ರೆಯ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ಕೊಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆಂಬುಲೆನ್ಸ್ಗಳ ಸೂಕ್ತ ನಿರ್ವಹಣೆ ಮಾಡಬೇಕು. ಆಸ್ಪತ್ರೆ ಆವರಣದಲ್ಲಿನ ನೀರಿನ ತೊಟ್ಟಿ ತೆರವುಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜನಾರ್ದನ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಡಾ. ಹರಪ್ರಸಾದ್ ಇದ್ದರು.</p>.<p><strong>ಗುಣಮಟ್ಟಕ್ಕೆ ಒತ್ತು ಕೊಡಿ:</strong>ಇಲ್ಲಿನ ನಗರಾಭಿವೃದ್ಧಿ ಕಚೇರಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಭೆ ನಡೆಸಿದ ಅವರು, ‘ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ಕೊಡಬೇಕು. ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬೇಕು’ ಎಂದು ಸೂಚನೆ ಕೊಟ್ಟರು.</p>.<p>ನಂತರ ನಗರದ ರೈಲು ನಿಲ್ದಾಣ, ಅಲ್ಲಿನ ಮೇಲ್ಸೇತುವೆ, ಸುತ್ತಮುತ್ತಲಿನ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಮಂಗಳವಾರ ಸಂಜೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಅಲ್ಲಿನ ಅಸ್ವಚ್ಛತೆ ನೋಡಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು.</p>.<p>ಸೂಕ್ತ ನಿರ್ವಹಣೆ ಇಲ್ಲದೆ ಆಸ್ಪತ್ರೆಯ ಹಿಂಬದಿಯಲ್ಲಿ ನಿಂತಿದ್ದ ಐದು ಆಂಬುಲೆನ್ಸ್ ಚಾಲಕರನ್ನು ತರಾಟೆಗೆ ತೆಗೆದುಕೊಂಡರು.</p>.<p>ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಬಳಿಕ ಆಸ್ಪತ್ರೆಯ ವೀಕ್ಷಣೆ ಮಾಡಿದರು. ಆಸ್ಪತ್ರೆಯ ಇಡೀ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.</p>.<p>‘ಇಡೀ ಆಸ್ಪತ್ರೆಯ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ಕೊಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆಂಬುಲೆನ್ಸ್ಗಳ ಸೂಕ್ತ ನಿರ್ವಹಣೆ ಮಾಡಬೇಕು. ಆಸ್ಪತ್ರೆ ಆವರಣದಲ್ಲಿನ ನೀರಿನ ತೊಟ್ಟಿ ತೆರವುಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜನಾರ್ದನ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಡಾ. ಹರಪ್ರಸಾದ್ ಇದ್ದರು.</p>.<p><strong>ಗುಣಮಟ್ಟಕ್ಕೆ ಒತ್ತು ಕೊಡಿ:</strong>ಇಲ್ಲಿನ ನಗರಾಭಿವೃದ್ಧಿ ಕಚೇರಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಭೆ ನಡೆಸಿದ ಅವರು, ‘ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ಕೊಡಬೇಕು. ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬೇಕು’ ಎಂದು ಸೂಚನೆ ಕೊಟ್ಟರು.</p>.<p>ನಂತರ ನಗರದ ರೈಲು ನಿಲ್ದಾಣ, ಅಲ್ಲಿನ ಮೇಲ್ಸೇತುವೆ, ಸುತ್ತಮುತ್ತಲಿನ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>