<p><strong>ಹಗರಿಬೊಮ್ಮನಹಳ್ಳಿ: </strong>‘ವಾಜಪೇಯಿ ಅವರ ಸಂಪುಟದಲ್ಲಿ ಮಂತ್ರಿ ಆದೋನು ನಾನು, ಈಗ ಯಾರಯಾರದೋ, ಅಂತಿಂಥವರ ಸಂಪುಟದಲ್ಲಿ ಸಚಿವನಾಗುವ ಗಿರಾಕಿ ನಾನಲ್ಲ’ ಎಂದು ಬಿಜಾಪುರ ಶಾಸಕಬಸನಗೌಡ ಪಾಟೀಲ ಯತ್ನಾಳ ಅವರು ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.</p>.<p>ಹಗರಿಬೊಮ್ಮನಹಳ್ಳಿ ಯಲ್ಲಿ ಶನಿವಾರ ಲಿಂಗಾಯತ ಪಂಚಮಸಾಲಿ ಸಮಾಜದ ಜನಜಾಗೃತ ಸಮಾವೇಶದಲ್ಲಿ ಮಾತನಾಡಿದರು.<br />ತಮಗೆ ಒದಗಿಸಿದ ಪೊಲೀಸ್ ಸೆಕ್ಯೂರಿಟಿ ಹಿಂಪಡೆದಿದ್ದಾರೆ, ಇಂಟೆಲಿಜೆನ್ಸ್ ಬಿಟ್ಟಿದ್ದಾರೆ ನಾಚಿಕೆ ಆಗಬೇಕು, ಅವರ ಮುತ್ತಜ್ಜ ಬಂದ್ರೂ ನನ್ನ ಏನೂ ಕಿತ್ತುಕೊಳ್ಳೋಕೆ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಆಸ್ತಿನೂ ಸಕ್ರಮ ವಾಗಿದೆ, ಏನು ಬೇಕಾದ್ರೂ ಮಾಡಲಿ ಎಂದು ಸವಾಲೆಸೆದರು.</p>.<p>ಯುವರಾಜ್ನನ್ನು ಮಂತ್ರಿ ಮಂಡಲ ವಿಸ್ತರಣೆ ಮಾಡಲು ಬಳಕೆ ಮಾಡಿಕೊಂಡು ಈಗ ಆತನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ ಎಂದರು.</p>.<p>ಸಚಿವ ಮುರುಗೇಶ್ ನಿರಾಣಿ ಬೆಕ್ಕಿನ ಜಾತಿಯವನು ಎಂದು ಕುಹಕ ಆಡಿದರು. 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು. ಭಾಷಣದುದ್ದಕ್ಕೂ ಸಿಎಂ ಮತ್ತು ಸಚಿವ ಮುರುಗೇಶ್ ನಿರಾಣಿಯವರನ್ನು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ: </strong>‘ವಾಜಪೇಯಿ ಅವರ ಸಂಪುಟದಲ್ಲಿ ಮಂತ್ರಿ ಆದೋನು ನಾನು, ಈಗ ಯಾರಯಾರದೋ, ಅಂತಿಂಥವರ ಸಂಪುಟದಲ್ಲಿ ಸಚಿವನಾಗುವ ಗಿರಾಕಿ ನಾನಲ್ಲ’ ಎಂದು ಬಿಜಾಪುರ ಶಾಸಕಬಸನಗೌಡ ಪಾಟೀಲ ಯತ್ನಾಳ ಅವರು ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.</p>.<p>ಹಗರಿಬೊಮ್ಮನಹಳ್ಳಿ ಯಲ್ಲಿ ಶನಿವಾರ ಲಿಂಗಾಯತ ಪಂಚಮಸಾಲಿ ಸಮಾಜದ ಜನಜಾಗೃತ ಸಮಾವೇಶದಲ್ಲಿ ಮಾತನಾಡಿದರು.<br />ತಮಗೆ ಒದಗಿಸಿದ ಪೊಲೀಸ್ ಸೆಕ್ಯೂರಿಟಿ ಹಿಂಪಡೆದಿದ್ದಾರೆ, ಇಂಟೆಲಿಜೆನ್ಸ್ ಬಿಟ್ಟಿದ್ದಾರೆ ನಾಚಿಕೆ ಆಗಬೇಕು, ಅವರ ಮುತ್ತಜ್ಜ ಬಂದ್ರೂ ನನ್ನ ಏನೂ ಕಿತ್ತುಕೊಳ್ಳೋಕೆ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಆಸ್ತಿನೂ ಸಕ್ರಮ ವಾಗಿದೆ, ಏನು ಬೇಕಾದ್ರೂ ಮಾಡಲಿ ಎಂದು ಸವಾಲೆಸೆದರು.</p>.<p>ಯುವರಾಜ್ನನ್ನು ಮಂತ್ರಿ ಮಂಡಲ ವಿಸ್ತರಣೆ ಮಾಡಲು ಬಳಕೆ ಮಾಡಿಕೊಂಡು ಈಗ ಆತನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ ಎಂದರು.</p>.<p>ಸಚಿವ ಮುರುಗೇಶ್ ನಿರಾಣಿ ಬೆಕ್ಕಿನ ಜಾತಿಯವನು ಎಂದು ಕುಹಕ ಆಡಿದರು. 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು. ಭಾಷಣದುದ್ದಕ್ಕೂ ಸಿಎಂ ಮತ್ತು ಸಚಿವ ಮುರುಗೇಶ್ ನಿರಾಣಿಯವರನ್ನು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>