ಹೊಸಪೇಟೆ: ಇತ್ತೀಚಿಗೆ ನಡೆದ ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಜಯ ಗಳಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಗುರುವಾರ ತಾಲ್ಲೂಕಿನ ಹಂಪಿಗೆ ಭೇಟಿ ನೀಡಿದರು.
ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಳಿಕ ಭುವನೇಶ್ವರಿ ದೇವಿ, ಪಂಪಾಂಬಿಕೆ ದೇವಿ ದರ್ಶನ ಪಡೆದರು. ನಂತರ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆಯಲು ಮಂತ್ರಾಲಯಕ್ಕೆ ಪ್ರಯಾಣ ಬೆಳೆಸಿದರು.
ಬಿಜೆಪಿ ಮುಖಂಡರಾದ ಶೇಖರ್ ಹಂಪಿ, ಮಲ್ಲಿಕಾರ್ಜುನ, ವೀರೇಶ್ವರ ಸ್ವಾಮಿ, ರವಿಕುಮಾರ್ ಇದ್ದರು.